ಅಕ್ರಮ-ಸಕ್ರಮ ಬಂಪರ್..!

Published : Nov 24, 2017, 10:07 AM ISTUpdated : Apr 11, 2018, 12:46 PM IST
ಅಕ್ರಮ-ಸಕ್ರಮ ಬಂಪರ್..!

ಸಾರಾಂಶ

ಇದುವರೆಗೂ ಕಂದಾಯ ಜಾಗದಲ್ಲಿ 2012ರ ಜನವರಿವರೆಗೆ ಅನಧಿಕೃತವಾಗಿ ನಿರ್ಮಿಸಿದ ವಾಸದ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿತ್ತು. ಅನಂತರ ನಿರ್ಮಾಣವಾದ ವಾಸದ ಮನೆಗಳಿಗೆ ಸಕ್ರಮಗೊಳಿಸಿಕೊಳ್ಳುವ ಅವಕಾಶವಿರಲಿಲ್ಲ.

ಬೆಂಗಳೂರು(ನ.24): ನಗರ, ಪಟ್ಟಣಗಳ ವ್ಯಾಪ್ತಿಯ ಕಂದಾಯ ಜಾಗದಲ್ಲಿರುವ ಮನೆಗಳ ಅಕ್ರಮ-ಸಕ್ರಮಕ್ಕೆ ನಿಗದಿ ಮಾಡಿದ್ದ ಕಟ್ ಅಫ್ ಸಮಯವನ್ನು 2015ರ ಜನವರಿವರೆಗೆ ವಿಸ್ತರಿಸುವ ಕರ್ನಾಟಕ ಭೂ ಕಂದಾಯ (ನಾಲ್ಕನೇ) ತಿದ್ದುಪಡಿ ವಿಧೇಯಕಕ್ಕೆ ಗುರುವಾರ ವಿಧಾನಸಭೆ ಒಪ್ಪಿಗೆ ನೀಡಿದೆ.

ಇದುವರೆಗೂ ಕಂದಾಯ ಜಾಗದಲ್ಲಿ 2012ರ ಜನವರಿವರೆಗೆ ಅನಧಿಕೃತವಾಗಿ ನಿರ್ಮಿಸಿದ ವಾಸದ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿತ್ತು. ಅನಂತರ ನಿರ್ಮಾಣವಾದ ವಾಸದ ಮನೆಗಳಿಗೆ ಸಕ್ರಮಗೊಳಿಸಿಕೊಳ್ಳುವ ಅವಕಾಶವಿರಲಿಲ್ಲ. ಕಟ್‌'ಆಫ್ ಅವಧಿ ವಿಸ್ತರಿಸಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಭೂ ಕಂದಾಯ ತಿದ್ದುಪಡಿ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯಲಾಗಿದ್ದು, ಇದರಂತೆ, 2015ರ ಜನವರಿವರೆಗೂ ನಿರ್ಮಿಸಿದ ಅನಧಿಕೃತ ಮನೆಗಳು ಅಕ್ರಮ-ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದು.

ಗುರುವಾರ ಸದನದಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸದನದಲ್ಲಿ ವಿಧೇಯಕ ಮಂಡಿಸಿದರು. ನಂತರ ಮಾತನಾಡಿ, ಅರ್ಜಿದಾರರು ಇನ್ನೂ ಅನೇಕ ಮಂದಿ ಇದ್ದಾರೆ. ಅವರಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿ ಎಂದು ಈ ವಿಧೇಯಕ ತರಲಾಗಿದೆ. ಇದಕ್ಕೆ ಸದನ ಒಪ್ಪಿಗೆ ನೀಡಬೇಕೆಂದು ವಿನಂತಿಸಿದರು. ಇದಕ್ಕೆ ಸ್ಪಂದಿಸಿದ ಸದನ ಸರ್ವಾನುಮತದಿಂದ ಅಂಗೀಕಾರ ನೀಡಿತು. ಇದರ ಪ್ರಕಾರ, ಭೂ ಕಂದಾಯ ಅಧಿನಿಯಮ 1964ರ ಅಧಿನಿಯದ 94ಸಿಯಲ್ಲಿ ಗ್ರಾಮೀಣ ಭಾಗದಲ್ಲಿ ಕಂದಾಯ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿದವರು ಅರ್ಜಿ ಸಲ್ಲಿಸಬಹುದು. ಅದೇರೀತಿ 94ಸಿಸಿಯಡಿ ಪಟ್ಟಣ, ನಗರ ಪ್ರದೇಶಗಳ ನಿವಾಸಿಗಳು ಅರ್ಜಿ ಸಲ್ಲಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು
ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ