ಫನಿ ಸಂತ್ರಸ್ತರಿಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್

Published : May 07, 2019, 04:33 PM ISTUpdated : May 07, 2019, 04:48 PM IST
ಫನಿ ಸಂತ್ರಸ್ತರಿಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್

ಸಾರಾಂಶ

ಒಡಿಶಾದಲ್ಲಿ ಅವಾಂತರ ಸೃಷ್ಟಿಸಿರುವ ಫನಿ ಚಂಡಮಾರುತ| ಫನಿ ಸಂತ್ರಸ್ತರಿಗಾಗಿ 1 ಕೋಟಿ ರೂ. ನೀಡಿದ ಅಕ್ಷಯ್ ಕುಮಾರ್| ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ| ಒಡಿಶಾಗೆ 1,000 ಕೋಟಿ ರೂ. ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ|

ಮುಂಬೈ(ಮೇ.07): ಸಾಮಾಜಿಕ ಕಾರ್ಯಗಳಲ್ಲಿ ಇತರ ಬಾಲಿವುಡ್ ನಾಯಕರಿಗಿಂತ ಅಕ್ಷಯ್ ಕುಮಾರ್ ಅವರದ್ದು ಎತ್ತಿದ ಕೈ. ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿರುವ ಅಕ್ಷಯ್ ಕುಮಾರ್, ಫನಿ ಚಂಡಮಾರುತದ ಸಂತ್ರಸ್ತರಿಗಾಗಿ 1 ಕೋಟಿ ರೂ. ಸಹಾಯಧನ ನೀಡಿದ್ದಾರೆ.

ಒಡಿಶಾದಲ್ಲಿ ಇತ್ತೀಚಿಗೆ ಭಾರೀ ಅನಾಹುತ ಸೃಷ್ಟಿಸಿರುವ ಫನಿ ಚಂಡಮಾರುತದ ಸಂತ್ರಸ್ತರ ನೆರವಿಗೆ ಅಕ್ಷಯ್ ಕುಮಾರ್ ಧಾವಿಸಿದ್ದಾರೆ. ಒಡಿಶಾ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅಕ್ಷಯ್ ಕುಮಾರ್ ಬರೋಬ್ಬರಿ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.

ಈ ಹಿಂದೆ ಸೈನಿಕರ ಕಲ್ಯಾಣ ನಿಧಿಗಾಗಿ ‘ಭಾರತ್ ಕೆ ವೀರ್’ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಅಕ್ಷಯ್, ಕೇರಳ ಪ್ರವಾಹದ ವೇಳೆಯೂ ಧನಸಹಾಯ ಮಾಡಿದ್ದರು.

ಲೋಕಸಭೆ ಚುನಾವಣೆಯಲ್ಲಿ ಅಕ್ಷಯ್ ಮತ ಚಲಾಯಿಸದ ಕಾರಣ, ಅವರ ಪೌರತ್ವದ ಕುರಿತು ವಿವಾದ ಭುಗಿಲೆದ್ದಿತ್ತು. ಆದರೆ ಸಂಕಷ್ಟದಲ್ಲಿರುವ ಭಾರತೀಯರ ನೆರವಿಗೆ ಸದಾ ಧಾವಿಸುವ ಮೂಲಕ ಅಕ್ಷಯ್ ತಾವೊಬ್ಬ ನಿಜವಾದ ಭಾರತೀಯ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ. 

ಫನಿ ಚಂಡಮಾರುತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಡಿಶಾಗೆ 381 ಕೋಟಿ ರೂ. ಬಿಡುಗಡೆ ಮಾಡಿದ್ದು, ಒಟ್ಟು 1,000 ಕೋಟಿ ರೂ. ಪರಿಹಾರ ನಿಧಿ ಘೋಷಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?