ಮುಸ್ಲಿಂ ಕಿರಕುಳ ಖಂಡಿಸಿ 9 ಸಚಿವರಿಂದ ರಾಜೀನಾಮೆ

Published : Jun 05, 2019, 09:49 AM IST
ಮುಸ್ಲಿಂ ಕಿರಕುಳ ಖಂಡಿಸಿ 9  ಸಚಿವರಿಂದ ರಾಜೀನಾಮೆ

ಸಾರಾಂಶ

ಮುಸ್ಲಿಮರಿಗೆ ನೀಡುವ ಕಿರಕುಳ ಖಂಡಿಸಿ 9 ಸಚಿವರು ರಾಜೀನಾಮೆ ನೀಡಿದ್ದಾರೆ.

ಕೊಲಂಬೋ: 250ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದ ಇತ್ತೀಚಿನ ಉಗ್ರರ ದಾಳಿಯ ಬಳಿಕ ದೇಶಾದ್ಯಂತ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಲೇ ಬಂದಿರುವುದನ್ನು ಖಂಡಿಸಿ ಶ್ರೀಲಂಕಾ ಸರ್ಕಾರದ 9 ಸಚಿವರು ಹಾಗೂ ಇಬ್ಬರು ರಾಜ್ಯಪಾಲರು ರಾಜೀನಾಮೆ ನೀಡಿದ್ದಾರೆ. 

ವಿನಾಕಾರಣ ಮುಸ್ಲಿಂ ಸಮುದಾಯದ ವಿರುದ್ಧವೇ ಆರೋಪ ಮಾಡಿ, ಎಲ್ಲರನ್ನೂ ಒಂದೇ ದೃಷ್ಟಿಕೋನದಲ್ಲಿ ನೋಡುವುದು ಸರಿಯಲ್ಲ. ಮುಸ್ಲಿಂ ಸಮುದಾಯದ ರಾಜಕಾರಣಿಗಳು ಉಗ್ರರ ದಾಳಿಯ ಹಿಂದಿದ್ದಾರೆ ಎಂಬರ್ಥದಲ್ಲಿ ಟೀಕಿಸುವವರಿಗೆ ಇದು ಪಾಠವಾಗಬೇಕು ಎಂದು ಶ್ರೀಲಂಕಾ ಮುಸ್ಲಿಂ ಕಾಂಗ್ರೆಸ್‌(ಎಸ್‌ಎಲ್‌ಎಂಸಿ) ಮುಖಂಡ ರೌಫ್‌ ಹಕೀನ್‌ ಹೇಳಿದ್ದಾರೆ.

 ಇದೇ ವೇಳೆ ದಾಳಿಯಲ್ಲಿ ನಮ್ಮ ಕೈವಾಡ ಇದ್ದರೆ ಅದನ್ನು ಸಾಬೀತುಪಡಿಸಿ ಎಂದು ಸಚಿವರು ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!