ಬಿಜೆಪಿ ತೊರೆಯುತ್ತಾ ಜೆಡಿಯು - ಶಾ, ನಿತೀಶ್ ಭೇಟಿಯಾಗಿದ್ದೇಕೆ..?

Published : Jul 12, 2018, 01:19 PM ISTUpdated : Jul 12, 2018, 01:22 PM IST
ಬಿಜೆಪಿ ತೊರೆಯುತ್ತಾ ಜೆಡಿಯು - ಶಾ, ನಿತೀಶ್ ಭೇಟಿಯಾಗಿದ್ದೇಕೆ..?

ಸಾರಾಂಶ

ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಹಾಗೂ ಜೆಡಿಯು ನಡುವೆ ಸೀಟು ಹಂಚಿಕೆ ಬಗ್ಗೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನಲಾಗಿತ್ತು. ಇದೀಗ ಬಿಜೆಪಿ ಮುಖಂಡ ಅಮಿತ್ ಶಾ ಅವರು ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದು, ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದಾರೆ. 

ಪಾಟ್ನಾ:  ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂದು ಬೆಳಗ್ಗೆ ಭೇಟಿ ಮಾಡಿದ್ದು, 2019ರ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದಾರೆ.

ಅಲ್ಲದೇ ಈ ವೇಳೆ ಬಿಜೆಪಿ ಮುಖಂಡ ಹಾಗೂ ಬಿಹಾರ ಉಪ ಮುಖ್ಯಮಂತ್ರಿ  ಸುಶೀಲ್ ಕುಮಾರ್ ಮೋದಿ ಅವರೂ ಕೂಡ ಹಾಜರಿದ್ದು, ಸೀಟುಗಳ ಹಂಚಿಕೆ ಕುರಿತಂತೆ ಮಾತುಕತೆ ನಡೆಸಲಾಗಿದೆ. 

ಕಳೆದ ಅನೇಕ ದಿನಗಳಿಂದಲೂ  ಕೂಡ  ಬಿಜೆಪಿ ಹಾಗೂ ಜೆಡಿಯು ನಡುವೆ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತಂತೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನಲಾಗಿತ್ತು.  ಕಳೆದ ಕೆಲ ದಿನಗಳ ಹಿಂದೆ ಜೆಡಿಯು ಮುಖಂಡರು 22ಕ್ಕಿಂತ ಹೆಚ್ಚಿನ ಸೀಟುಗಳನ್ನು ಬಿಟ್ಟುಕೊಡುವುದಿಲ್ಲ ಎಂದು ಕೂಡ ಹೇಳಿದ್ದರು.

ಆದರೆ ಭಾನುವಾರ ಸಭೆ ನಡೆಸಿದ ಜೆಡಿಯು ಮುಖಂಡರು ಬಿಜೆಪಿಯೊಂದಿಗೆ ಸೇರಿ ಮೈತ್ರಿಯಾಗಿ  ಚುನಾವಣೆ ಎದುರಿಸುವುದನ್ನು ಖಚಿತ ಪಡಿಸಿದ್ದರು. ಅಲ್ಲದೇ ಇದೀಗ ಜೆಡಿಯು ಮುಖಂಡರನ್ನು ಅಮಿತ್ ಶಾ ಭೇಟಿ ಮಾಡಿ ಮೈತ್ರಿಯಾಗಿ ಚುನಾವಣೆ ಎದುರಿಸುವ ಸಂಬಂಧವಾಗಿ  ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

HD Kumaraswamy birthday: ಎಚ್‌ಡಿಕೆಗೆ  ₹3.50 ಲಕ್ಷದ 25 ಗ್ರಾಂನ ಚಿನ್ನದ ಸರ ಕೊಟ್ಟ ಅಭಿಮಾನಿ!
ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ Congress-BJP ನಡುವೆ ಗದ್ದಲ