ರಾಜ್ಯ ರಾಜಕೀಯ ಹೈ ಡ್ರಾಮಾ ಮುಂದುವರಿದಿದೆ. ಶಾಸಕರ ರಾಜೀನಾಮೆ ಬೆನ್ನಲ್ಲೇ ಕೈ ಸಚಿವರು ರಾಜೀನಾಮೆ ನೀಡಿದರು. ಇದೀಗ ಜೆಡಿಎಸ್ ಸಚಿವರೂ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಂಗಳೂರು [ಜು.08] : ಕರ್ನಾಕದಲ್ಲಿ ರಾಜಕೀಯ ಹೈ ಡ್ರಾಮ ಮೇರು ಹಂತಕ್ಕೆ ತಲುಪಿದೆ. ಈಗಾಗಲೇ 14 ಶಾಸಕರು ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡಿದ್ದಾರೆ.
ಇತ್ತ ಕಾಂಗ್ರೆಸ್ ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದು, ಅದರಂತೆ ಜೆಡಿಎಸ್ ನ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ನ 21 ಸಚಿವರು ರಾಜೀನಾಮೆ ನೀಡಿದ್ದು, ಹಾಗೆಯೇ ಜೆಡಿಎಸ್ ಮ 9 ಸಚಿವರೂ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಎಲ್ಲಾ ಸಚಿವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಶೀಘ್ರ ಸಚಿವ ಸಂಪುಟ ಪುನಾರಚನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.