ಸರ್ವಪಕ್ಷ ಸಭೆ ಮುಕ್ತಾಯ, ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ-ಸಿಎಂ

Published : Sep 21, 2016, 03:05 PM ISTUpdated : Apr 11, 2018, 12:51 PM IST
ಸರ್ವಪಕ್ಷ ಸಭೆ ಮುಕ್ತಾಯ, ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ-ಸಿಎಂ

ಸಾರಾಂಶ

ಬೆಂಗಳೂರು (ಸೆ.21): ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕರೆದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದೆ.

ಸಭೆಯಲ್ಲಿ  ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಿದ್ದರು. 20 ವರ್ಷಗಳ ಬಳಿಕ  ದೇವೇಗೌಡರು ಸರ್ವ ಪಕ್ಷ ಸಭೆಯಲ್ಲಿ ಭಾಗಿಯಾಗಿ ಸಲಹೆ ನೀಡಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ರೈತ ನಾಯಕ ಪುಟ್ಡಣಯ್ಯ ಕೂಡ ಭಾಗವಹಿಸಿ  ಸಾಕಷ್ಟು ಸಲಹೆ ನೀಡಿದ್ದಾರೆ. ಬಿಜೆಪಿ ನಾಯಕರು ಸರ್ವಪಕ್ಷ ಸಭೆಗೆ ಬಂದಿಲ್ಲ‌. ಯಾಕೆ ಬಿಜೆಪಿ ನಾಯಕರು‌ ಬಂದಿಲ್ಲ ಗೊತ್ತಿಲ್ಲ. ನಾವು  ಆಹ್ವಾನ ನೀಡಿದ್ದೆವು ಎಂದು ಸಿಎಂ ಹೇಳಿದ್ದಾರೆ. 

ಈ ಸಭೆಯಲ್ಲಿ ಚರ್ಚಿತವಾದ ವಿಚಾರವನ್ನು  ತುರ್ತು ಸಚಿವ ಸಂಪುಟ ಸಭೆಯ ಮುಂದಿಡುತ್ತೇವೆ.  ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸರ್ವಪಕ್ಷ ಸಭೆ ಬಳಿಕ  ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!
ಬೆಳಗಾವಿ ಅಧಿವೇಶನ ಕೊನೆ ದಿನವೂ ಗದ್ದಲ: ವಿಪಕ್ಷ, ಸಂಘಟನೆಗಳಿಂದ ಪ್ರತಿಭಟನೆ!