ರೈಲು ಚಾಲಕನ ವಿವೇಕದಿಂದ ತಪ್ಪಿತು ಭಾರಿ ದುರಂತ

Published : Feb 09, 2017, 03:19 PM ISTUpdated : Apr 11, 2018, 12:34 PM IST
ರೈಲು ಚಾಲಕನ ವಿವೇಕದಿಂದ ತಪ್ಪಿತು ಭಾರಿ ದುರಂತ

ಸಾರಾಂಶ

ಕುಣಿಗಲ್ (ಫೆ.09): ನೂರಕ್ಕೂ ಅಧಿಕ ಸಿಬ್ಬಂದಿ ಹೊತ್ತ ಪರೀಕ್ಷಾರ್ಥ ರೈಲಿಗೆ ಸಂಭವಿಸಬಹುದಾಗಿದ್ದ ಭಾರಿ ಅವಘಡ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿರುವ ಘಟನೆ ನಡೆದಿದೆ. 

ಕುಣಿಗಲ್ (ಫೆ.09): ನೂರಕ್ಕೂ ಅಧಿಕ ಸಿಬ್ಬಂದಿ ಹೊತ್ತ ಪರೀಕ್ಷಾರ್ಥ ರೈಲಿಗೆ ಸಂಭವಿಸಬಹುದಾಗಿದ್ದ ಭಾರಿ ಅವಘಡ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿರುವ ಘಟನೆ ನಡೆದಿದೆ. 

ರೈಲ್ವೆ ಕಾಮಗಾರಿಯಿಂದ ಮಲ್ಲಾಘಟ್ಟ ವಾರ್ಡ್ ಇಬ್ಭಾಗವಾಗಿದ್ದು ಜನರಿಗೆ ತೊಂದರೆ ಆಗುತ್ತಿದೆ. ಅದನ್ನು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಡದ ರೈಲ್ವೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಗುರುವಾರ ರೈಲು ಹಳಿಗೆ ಬಂಡೆಗಳನ್ನಿಟ್ಟು ಗುರುವಾರ ನಾಗರಿಕರು ಪ್ರತಿಭಟನೆ ನಡೆಸಿದರು. 

ಇದೇ ಸಂದರ್ಭದಲ್ಲಿ ತಾಲೂಕಿನ ಎಡೆಯೂರಿನಿಂದ ನಾಗಮಂಗಲ ತಾಲೂಕಿನ ಬಾಲಗಂಗಾಧರ ನಗರದವರೆಗಿನ ನೆಲಮಂಗಲ-ಶ್ರವಣಬೆಳಗೊಳ ನೂತನ ರೈಲ್ವೆ ಹಳಿ ಕಾಮಗಾರಿ ಪರಿಶೀಲನೆಗೆ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ರೈಲಿನಲ್ಲಿ ಹೊರಟಿದ್ದರು. ಈ ಸಂದರ್ಭದಲ್ಲಿ ಪಟ್ಟಣದ ಎರಡನೆ ವಾರ್ಡ್‌ನ ಮಲ್ಲಾಘಟ್ಟ ಬಳಿ ರೈಲ್ವೆ ಹಳಿಗೆ ಬಂಡೆಹಾಕಿದ್ದನ್ನು ಗಮನಿಸಿದ ರೈಲು ಚಾಲಕ ದಿಢೀರ್ ರೈಲು ನಿಲ್ಲಿಸಿದ್ದರಿಂದ ಸಂಭವಿಸಬಹುದಾಗಿದ್ದ ಭಾರಿ ಅವಘಡ ತಪ್ಪಿಹೋಗಿದೆ. ರೈಲು ನಿಂತ ಶಬ್ದಕ್ಕೆ ಬೆಚ್ಚಿದ ಯುವಕರ ಗುಂಪು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವೇಳೆ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರಿಕರಿಸುತ್ತಿದ್ದ ಮಲ್ಲಾಘಟ್ಟದ ರಫೀಕ್, ಶಫೀ, ಇಕ್ಬಾಲ್ ಎಂಬ ಯುವಕರನ್ನು ರೈಲ್ವೆ ಪೋಲಿಸರು ವಶಕ್ಕೆ ಪಡೆದು ಬೆಂಗಳೂರಿನ ರೈಲ್ವೆ ನ್ಯಾಯಾಲಯದಲ್ಲಿ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!