ಪ್ರಾಣ ಬಿಡುವ ಮೊದಲು ನನ್ನ ಕೊನೆ ಆಸೆ ಈಡೇರಿಸಿ: ಹಾಗಾದ್ರೆ ದೇವೇಗೌಡರ ಕೊನೆ ಆಸೆ ಏನು?

Published : Oct 30, 2018, 03:20 PM ISTUpdated : Oct 30, 2018, 03:21 PM IST
ಪ್ರಾಣ ಬಿಡುವ ಮೊದಲು ನನ್ನ ಕೊನೆ ಆಸೆ ಈಡೇರಿಸಿ: ಹಾಗಾದ್ರೆ ದೇವೇಗೌಡರ ಕೊನೆ ಆಸೆ ಏನು?

ಸಾರಾಂಶ

ನಾನು ಪ್ರಾಣ ಬಿಡುವ ಮೊದಲು ನನ್ನ ಕೊನೆ ಆಸೆ ಈಡೇರಿಸಿ ಎಂದು ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಹಾಗಾದ್ರೆ ದೇವೇಗೌಡರ ಕೊನೆ ಆಸೆ ಏನು? ಇಲ್ಲಿದೆ ನೋಡಿ.

ರಾಮನಗರ, (ಅ.30): ನನಗೆ ಜೀವನದ ಅಂತ್ಯದಲ್ಲಿ ಪ್ರಾದೇಶಿಕ ಪಕ್ಷಗಳೆಲ್ಲ ಒಂದಾಗಿ ಬಿಜೆಪಿಯನ್ನು ನಿರ್ಮೂಲನೆ ಮಾಡಬೇಕು ಎಂಬ ಬಹುದೊಡ್ಡ ಆಕಾಂಕ್ಷೆಯಿದ್ದು, ಆ ಮೂಲಕ ನೆಮ್ಮದಿಯಿಂದ ಪ್ರಾಣಬಿಡಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಹೇಳಿದ್ದಾರೆ.

ಅವರು ರಾಮನಗರದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರದಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ದೇಶದಲ್ಲಿ ಜಾತ್ಯಾತೀತ ಬದ್ಧತೆಯುಳ್ಳ ಪಕ್ಷಗಳು ಒಂದುಗೂಡಬೇಕು. ಇದು ನನ್ನ ಕೊನೆಯ ಆಸೆ ಎಂದರು.

ಕಾಂಗ್ರೆಸ್ ಸೇರಿ 13 ರಾಜಕೀಯ ಪಕ್ಷಗಳು ಬೆಂಬಲ ನೀಡಿದ್ದರಿಂದಲೇ ನಾನು ಪ್ರಧಾನ ಮಂತ್ರಿಯಾಗಿದ್ದೆ. ಇದರಲ್ಲಿ ದೈವದ ಲೀಲೆಯೂ ಇದೆ. ಈಗ ಅದೇ ಪಕ್ಷದ ಮುಖಂಡರು ಪ್ರಬಲವಾಗಿ ಬೆಳೆದಿದ್ದಾರೆ ಎಂದು ಹೇಳಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೂ ಕಾಂಗ್ರೆಸ್ ನಮಗೆ ಅವಕಾಶವನ್ನು ಕೊಟ್ಟಿದೆ ಎಂದು ಹೇಳಿದ ಎಚ್ ಡಿ ದೇವೇಗೌಡರು ತಾವು ಪ್ರಧಾನಿಯಾದಾಗ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡಿದ್ದನ್ನು ಮೆಲುಕು ಹಾಕಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು: ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ