
ಚೆನ್ನೈ(ಜೂ.06): ತಮಿಳು ನಾಡು ಸರ್ಕಾರ ಹೊಸ ಕಾನೂನನ್ನು ಜಾರಿಗೊಳಿಸಿದ್ದು,ಎಲ್ಲ ರಾಜ್ಯ ಸರ್ಕಾರದ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಆದೇಶಿಸಿದೆ.
ಸರ್ಕಾರವು ರಾಜ್ಯಕ್ಕೆ ಒಳಿತಾಗುವ 40ಕ್ಕೂ ಹೆಚ್ಚು ಸುಧಾರಣೆಗಳನ್ನು ಜಾರಿಗೊಳಿಸಿದ್ದು,ಇವುಗಳಲ್ಲಿ ರಾಜ್ಯ ಸರ್ಕಾರದ ಎಲ್ಲ ಸಿಬ್ಬಂದಿ ತಮ್ಮ ಮಕ್ಕಳನ್ನು ಸರ್ಕಾರಿ ಇಲ್ಲವೆ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಸೇರಿಸಬೇಕೆಂದು ಕಾನೂನು ರಚಿಸಿದೆ. ಆದರೆ ಮುಖ್ಯಮಂತ್ರಿಗಳು ಅಧಿಕೃತ ಆದೇಶ ಹೊರಡಿಸಿದರಷ್ಟೆ ಕಾನೂನು ಪರಿಪೂರ್ಣವಾಗಿ ಅನ್ವಯವಾಗಲಿದೆ.
ಸರಕಾರಿ ನೌಕರರೇ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುವುದು ಸರಿಯಲ್ಲ. ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಂತೆ ಉನ್ನತ ದರ್ಜೆಗೆ ಏರಿಸಲಾಗುವುದು ಎಂದು ಈ ಹಿಂದೆ ಭರವಸೆ ನೀಡಿದ್ದರು. ಅಲ್ಲದೆ ಸರಕಾರಿ ಶಾಲೆಗಳಲ್ಲಿ ಉತ್ತಮ ಮೂಲಭೂತ ಸೌಕರ್ಯಗಳಿಲ್ಲ ಎಂದು ದೂರಲಾಗುತ್ತಿದೆ. ಉತ್ತಮ ಸೌಕರ್ಯಗಳನ್ನು ಒದಗಿಸಿದರೂ ಶಾಲೆಗೆ ಬರುವ ಮಕ್ಕಳ ಹಾಜರಾತಿ ಕಡಿಮೆಯಿದೆ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ನೂತನ ನಿಯಮಗಳನ್ನು ರಚಿಸಲಾಗಿದೆ.
(ಸಾಂದರ್ಭಿಕ )
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.