
ಬೆಂಗಳೂರು(ಜುಲೈ 02): ಒಂದೇ ಪ್ರದೇಶದಲ್ಲಿ ಎಟಿಎಂಗಳಿಂದ ಲಕ್ಷಾಂತರ ಹಣ ಲೂಟಿಯಾಗುವುದು ಸಣ್ಣ ವಿಷಯವೇ? ನಗರದ ಕೊತ್ತನೂರು ಮತ್ತು ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಕಳುವಾಗಿದೆ. 20 ಜನರು ಸೈಬರ್ ಕ್ರೈಮ್ ಪೊಲೀಸ್'ರಿಗೆ ದಾಖಲಿಸಿದ್ದಾರೆ. ಪಾಸ್'ವರ್ಡ್ ಹ್ಯಾಕ್ ಮಾಡಿ ನಗರದ ವಿವಿಧ ಎಟಿಎಂಗಳಿಂದ ಸೈಬರ್ ಕಳ್ಳರು ಹಣ ಡ್ರಾ ಮಾಡಿಕೊಂಡಿದ್ದಾರೆನ್ನಲಾಗಿದೆ. ನಿನ್ನೆ ತಡರಾತ್ರಿ ಕಳ್ಳರು ಈ ಕೈಚಳಕ ತೋರಿರುವುದು ಬೆಳಕಿಗೆ ಬಂದಿದೆ.
ಇಂದು ಭಾನುವಾರ ಬೆಳಗ್ಗೆಯಿಂದಲೇ ಸೈಬರ್ ಕ್ರೈಂ ಪೊಲೀಸ್ ವಿಭಾಗಕ್ಕೆ ದೂರುಗಳು ಬರಲು ಆರಂಭವಾಗಿದೆ. ಮಧ್ಯಾಹ್ನದಷ್ಟರಲ್ಲಿ 20ಕ್ಕೂ ಹೆಚ್ಚು ಸಂತ್ರಸ್ತರು ದೂರು ದಾಖಲಿಸಿದ್ದಾರೆ. ಕಳುವಾಗಿರುವ ಒಟ್ಟು ಹಣ 10 ಲಕ್ಷಕ್ಕೂ ಮೇಲ್ಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.