
2017ರ ಮೇ 15ರಂದು ನಡೆದ ಹಾವೇರಿ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯ ಶಿವಾನಂದ ಕನ್ನಪ್ಪಳವರ ಸಲ್ಲಿಸಿದ್ದ ಪ್ರಸ್ತಾವನೆಗೆ ಉಳಿದ ಸದಸ್ಯರು ಸಹಮತ ವ್ಯಕ್ತಪಡಿಸಿರುವುದು ದಾಖಲೆಗಳಿಂದ ತಿಳಿದು ಬಂದಿದೆ.
ಇಡುವಂತಿಲ್ಲ: ಸರ್ಕಾರಿ ಕಚೇರಿ ಕಟ್ಟಡಗಳಿಗೆ ಚುನಾಯಿತ ಪ್ರತಿನಿಧಿಗಳ ಹೆಸರನ್ನು ನಾಮಕರಣ ಮಾಡಲು ಅವಕಾಶವಿಲ್ಲ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸದಸ್ಯರ ಗಮನಕ್ಕೆ ತಂದಿದ್ದರೂ ಸದಸ್ಯರು ಇದನ್ನು ಒಪ್ಪದೇ ಕೆ.ಬಿ.ಕೋಳಿವಾಡ ಅವರ ಹೆಸರನ್ನೇ ಇಡಬೇಕು ಎಂದು ಸಹಮತ ವ್ಯಕ್ತಪಡಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.
ಹಾವೇರಿ ಜಿಲ್ಲಾ ಪಂಚಾಯ್ತಿಯ ಈ ಹಿಂದಿನ ಸಮಿತಿ, ಸಭಾ ಭವನಕ್ಕೆ ಸಿ.ಎಂ.ಉದಾಸಿ ಅವರ ಹೆಸರನ್ನು ನಾಮಕರಣ ಮಾಡಿದ್ದು, ಇದೇ ಮಾದರಿಯಲ್ಲೇ ಕಾರ್ಯಾಲಯಕ್ಕೂ ಕೆ.ಬಿ.ಕೋಳಿವಾಡ ಅವರ ಹೆಸರನ್ನು ಇಡಬೇಕು ಎಂಬುದು ಸದಸ್ಯರ ವಾದವಾಗಿದೆ. ಒಂದು ವೇಳೆ ಕೋಳಿವಾಡ ಅವರ ಹೆಸರನ್ನು ನಾಮಕರಣ ಮಾಡಲು ಅವಕಾಶ ನೀಡದಿದ್ದಲ್ಲಿ ಸಭಾಭವನಕ್ಕೆ ಇಟ್ಟಿರುವ ಸಿ.ಎಂ.ಉದಾಸಿ ಅವರ ಹೆಸರನ್ನೂ ತೆಗೆಯಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993ರ ಪ್ರಕರಣ 197(2) ಹಾಗೂ (3)ರ ಪ್ರಕಾರ ಇಂತಹ ನಿರ್ಣಯಗಳನ್ನು ಅಂಗೀಕರಿಸಲು ಅವಕಾಶಗಳಿಲ್ಲ. ಆದರೂ ಜಿಲ್ಲಾ ಪಂಚಾಯ್ತಿ ಸದಸ್ಯರು ಸ್ಪೀಕರ್ ಕೋಳಿವಾಡ ಅವರ ಹೆಸರನ್ನೇ ಕಾರ್ಯಾಲಯಕ್ಕೆ ನಾಮಕರಣ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಲ್ಲಿಸಿರುವ ಪ್ರಸ್ತಾವನೆಯಿಂದ ತಿಳಿದು ಬಂದಿದೆ.
ವರದಿ: ಜಿ. ಮಹಾಂತೇಶ್, ಸುವರ್ಣನ್ಯೂಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.