ಮೈತ್ರಿಯಿಂದ ಕೇವಲ ಎರಡಲ್ಲ, 6 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಲಾಭ!

Published : Jan 13, 2019, 05:07 PM ISTUpdated : Jan 13, 2019, 05:09 PM IST
ಮೈತ್ರಿಯಿಂದ ಕೇವಲ ಎರಡಲ್ಲ, 6 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಲಾಭ!

ಸಾರಾಂಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ SP ಮತ್ತು ಬಿಎಸ್ ಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಈಗಾಗಲೇ ಕಾಂಗ್ರೆಸ್‌ ಪಕ್ಷವನ್ನು ಮೈತ್ರಿಯಿಂದ ಹೊರಗಿಡಲಾಗಿದೆ ಎನ್ನಲಗಿದೆ. ಹೀಗಿದ್ದರೂ ಕಾಂಗ್ರೆಸಡ್‌ಗೆ ಮಾಯ, ಅಖಿಲೇಶ್ ನಡೆಯಿಂದ ಬರೋಬ್ಬರಿ 6 ಕ್ಷೇತ್ರಗಳಲ್ಲಿ ಲಾಭವಾಗಲಿದೆ.

ಲಕ್ನೋ[ಜ.13]: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ SP ಮತ್ತು ಬಿಎಸ್ ಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಹೀಗಿದ್ದರೂ ಉಭಯ ಪಕ್ಷಗಳು ಕಾಂಗ್ರೆಸ್ ಪಕ್ಷದ ಕುರಿತಾಗಿ ಮೃಧು ಧೋರಣೆ ಹೊಂದಿವೆ. ಪ್ರಮುಖ ಕ್ಷೇತ್ರಗಳಾದ ಅಮೇಟಿ ಹಾಗೂ ರಾಯ್ ಬರೇಲಿಯನ್ನು ಸೋನಿಯಾ ಹಾಗೂ ರಾಹುಲ್ ಗಾಂಧಿಗಾಗಿ ಮೀಸಲಿಟ್ಟಿರುವುದು ಇದಕ್ಕೆ ಸಾಕ್ಷಿ ಎಂಬಂತಿದೆ. ಆದರೆ ಈ ಕ್ಷೇತ್ರಗಳನ್ನು ಯಾಕೆ ಬಿಟ್ಟುಕೊಟ್ಟಿದ್ದಾರೆ? ಇದರ ಹಿಂದಿನ ಕಾರಣ ಏನು? ಎಂಬುವುದು ತಿಳಿದು ಬಂದಿಲ್ಲ.

ಎಸ್ ಪಿ ಹಾಗೂ ಬಿಎಸ್ ಪಿಯ ಈ ಹೆಜ್ಜೆ ತೆರೆ ಹಿಂದಿನ ಮೈತ್ರಿ ಮುಂದುವರೆಯುತ್ತದೆ ಎಂಬುವುದನ್ನು ಸ್ಪಷ್ಟಪಡಿಸಿದೆ. ಹೀಗಿದ್ದರೂ ಬಿಎಸ್ ಪಿ ಹಾಗೂ ಎಸ್ ಪಿಯ ಈ ನಿರ್ಧಾರದಿಂದ ಕಾಂಗ್ರೆಸ್ ಗೆ ಕೇವಲ ಎರಡಲ್ಲ, ಆರು ಕ್ಷೇತ್ರಗಳಲ್ಲಿ ಲಾಭವಾಗುವುದು ಬಹುತೇಕ ಖಚಿತವಾಗಿದೆ. ಅದರಲ್ಲೂ ಮುಖ್ಯವಾಗಿ 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತಾನು ಸೋತ ಕ್ಷೇತ್ರಗಳಲ್ಲೇ ಗೆಲುವು ಸಾಧಿಸಲು ಕಾಂಗ್ರೆಸ್ ಅಣಿಯಾಗಿದೆ.
ಕಾಂಗ್ರೆಸ್ ಗೆಲುವು ಸಾಧಿಸಲು ಸನ್ನದ್ಧವಾಗಿರುವ 6 ಕ್ಷೇತ್ರಗಳಲ್ಲಿ ಎಸ್ ಪಿ ಬಿಎಸ್ ಪಿ ತನ್ನ ಪಕ್ಷದ ಅಭ್ಯರ್ಥಿಗಳನ್ನು ಈಗಾಗಲೇ ಕಣಕ್ಕಿಳಿಸಿದೆ. ಹೀಗಿದ್ದರೂ ಈ ಅಭ್ಯರ್ಥಿಗಳು ಕಾಂಗ್ರೆಸ್ ಸ್ಪರ್ಧಿಗಳ ಎದುರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಈ 6 ಕ್ಷೇತ್ರಗಳಲ್ಲಿ ಸಹಾರನ್ ಪುರ್, ಕಾನ್ಪುರ್ ಹಾಗೂ ಗಾಜಿಯಾಬಾದ್ ನ ಪ್ರಮುಖ ಕ್ಷೇತ್ರಗಳೂ ಇವೆ.

ಲಭ್ಯವಾದ ಮಾಹಿತಿ ಅನ್ವಯ ಕಾಂಗ್ರೆಸ್ ಕೂಡಾ ಇಂತಹುದೇ ತಂತ್ರ ಹೆಣೆಯಲಿದೆ. ಎಸ್ ಪಿ ಹಾಗೂ ಎಸ್ ಪಿ ಪಕ್ಷದ ಈ ಮೃಧು ಧೋರಣೆಯ ಬದಲಿಗೆ ಕಾಂಗ್ರೆಸ್ ಪಕ್ಷವು ತಾನು ಸೋಲುತ್ತೇನೆಂಬ ಕ್ಷೇತ್ರಗಳಲ್ಲಿ, ಮಾಯಾ ಹಾಗೂ ಅಖಿಲೇಶ್ ಪಕ್ಷದ ಅಭ್ಯರ್ಥಿಗಳೆದುರು ಬಿಜೆಪಿ ಅಭ್ಯರ್ಥಿಯ ಮತಗಳನ್ನು ಕಡಿಮೆಗೊಳಿಸುವಂತಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಇದಕ್ಕಾಗೇ ಇಂತಹ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಅಭ್ಯರ್ಥಿಗಳಿಗೆ ಅವಕಾಶ ನಿಡಲಿದೆ. ಈ ಮೂಲಕ ಪರೋಕ್ಷವಾಗಿ ಮೈತ್ರಿ ಪಕ್ಷಗಳಿಗೆ ಬೆಂಬಲ ಸೂಚಿಸಲಿದೆ.

2014ರಲ್ಲಿ ಕಾಂಗ್ರೆಸ್ ಈ ಕೆಳಗಿನ ಕ್ಷೇತ್ರಗಳಲ್ಲಿ ಬಿಜೆಪಿ ಎದುರು ಸೋಲುಂಡಿತ್ತು.

ಕ್ಷೇತ್ರಬಿಜೆಪಿ ಮತಗಳುಕಾಂಗ್ರೆಸ್ ಮತಗಳುಅಂತರ
ಸಹಾರ್‌ಪುರ್47299940790965090
ಲಕ್ನೋ561106288357272749
ಕಾನ್‌ಪುರ್474712251766222946
ಬಾರಾಬಂಕಿ454214242336211878
ಕುಶೀನಗರ್37005128451185540
ಗಾಜಿಯಾಬಾದ್758482191222567260


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?