ಬಿಜೆಪಿ ಗೆಲ್ಲಿಸಿದ್ದು ಕೇಂದ್ರದಲ್ಲಿ ಅಧಿಕಾರ ನಡೆಸಲೇ ಹೊರತು ಸರ್ಕಾರ ಬೀಳಿಸಲು ಅಲ್ಲ

Published : May 27, 2019, 04:36 PM ISTUpdated : May 27, 2019, 04:40 PM IST
ಬಿಜೆಪಿ ಗೆಲ್ಲಿಸಿದ್ದು ಕೇಂದ್ರದಲ್ಲಿ ಅಧಿಕಾರ ನಡೆಸಲೇ ಹೊರತು ಸರ್ಕಾರ ಬೀಳಿಸಲು ಅಲ್ಲ

ಸಾರಾಂಶ

ಕೇಂದ್ರದಲ್ಲಿ ಅಧಿಕಾರ ನಡೆಸಲು ರಾಜ್ಯದಲ್ಲಿ ಬಿಜೆಪಿ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದೆ. ರಾಜ್ಯದಲ್ಲಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಇದಕ್ಕೆ ಕಾರಣ ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು  ರಾಜ್ಯದಲ್ಲಿ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿ ಎಂದಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಸರಣಿ ಟ್ವೀಟ್ ಮಾಡಿದ್ದಾರೆ. 

ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆ ವಿಸರ್ಜನೆ ಮಾಡಲಿ ಎನ್ನುವುದು ಸರಿಯಲ್ಲ ಎಂದಿದ್ದಾರೆ. 

 

ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ವಿಚಾರವಾಗಿಯೂ  ಟ್ವೀಟ್ ಮಾಡಿದ್ದು, ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ.  ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಎಂದು ಹೇಳುತ್ತಲೇ ಇದ್ದಾರೆ.  ಇನ್ನೂ ನಾಲ್ಕು ವರ್ಷ ಹೀಗೆ ಹೇಳುತ್ತಾರೆ. ಸರ್ಕಾರ ಸುಭದ್ರವಾಗಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. 

 

ಜೂನ್ ಒಂದರ ಒಳಗೆ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂಪ್ಪ ಹೇಳಿದ್ದು, ಅದು ಸಾಧ್ಯವಾಗದಿದ್ದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತಾರಾ ಎಂದು ಸವಾಲು ಹಾಕಿದರು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್