
ಅಮರಾವತಿ: ಕೇಂದ್ರ ಸರ್ಕಾರದ ಸಚಿವ ಸ್ಥಾನದಿಂದ ಹಿಂದೆ ಸರಿದಿರುವ ಟಿಡಿಪಿ, ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಕೇಂದ್ರ ಸರ್ಕಾರದಿಂದ ಬೆಂಬಲ ಹಿಂದೆ ಪಡೆದಿರುವುದು ಮೊದಲ ಹೆಜ್ಜೆ.
ಎರಡನೇ ಹೆಜ್ಜೆ ಏನಾಗಿರುತ್ತದೆ ಎಂದು ಕಾದುನೋಡಬೇಕು. ನಮ್ಮ ಮೈತ್ರಿ ಭದ್ರವಾಗಿದೆ, ಆದರೆ ಕೇಂದ್ರದಿಂದ ದೊರೆಯಬೇಕಾದ ರಾಜ್ಯದ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯುತ್ತದೆ ಎಂದು ರಾಜ್ಯ ಹಣಕಾಸು ಸಚಿವ ಯನಮಾಲ ರಾಮಕೃಷ್ಣಡು ಹೇಳಿದ್ದಾರೆ.
ಆಂಧ್ರ ಪ್ರದೇಶಕ್ಕೆ ಸಹಕಾರ ನೀಡುವ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿಕೆ ಬೇಸರ ತರಿಸಿದೆ. ಕೇಂದ್ರದಲ್ಲಿ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ವೈಎಸ್ಆರ್ ಕಾಂಗ್ರೆಸ್ ಸಲಹೆಯು ಅನೈತಿಕವಾದುದು ಎಂದೂ ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.