ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ : ಭಾರೀ ಅವಘಡದಿಂದ ಬಿಜೆಪಿ ಸಂಸದ ಪಾರು

Published : Jul 01, 2019, 09:15 AM IST
ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ : ಭಾರೀ ಅವಘಡದಿಂದ ಬಿಜೆಪಿ ಸಂಸದ ಪಾರು

ಸಾರಾಂಶ

ಬಿಜೆಪಿ ಸಂಸದರಿದ್ದ ಹೆಲಿಕಾಪ್ಟರ್‌ ಟೇಕ್‌ಆಫ್‌ ಮಾಡುವ ವೇಳೆ ಪೈಲಟ್‌ನ ನಿಯಂತ್ರಣ ತಪ್ಪಿ ಭಾರೀ ಅತಂಕ ಸೃಷ್ಟಿಸಿದ್ದ ಘಟನೆ ನಡೆದಿದೆ.   

ಅಲ್ವರ್‌(ರಾಜಸ್ಥಾನ) [ಜು.1]: ಬಿಜೆಪಿ ಸಂಸದ ಮಹಾಂತ್‌ ಬಾಲಾಕಾಂತ್‌ ಅವರಿದ್ದ ಹೆಲಿಕಾಪ್ಟರ್‌ ಟೇಕ್‌ಆಫ್‌ ಮಾಡುವ ವೇಳೆ ಪೈಲಟ್‌ನ ನಿಯಂತ್ರಣ ತಪ್ಪಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಭಾನುವಾರ ನಡೆದಿದೆ. 

ಅಲ್ವರ್‌ ಜಿಲ್ಲೆಯ ಕೋಟ್‌ಕಾಸೀಮ್‌ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಸಂಸದರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಲಾಕಾಂತ್‌ ಅವರು ದೇವಾಲಯಕ್ಕೆ ಭೇಟಿ ನೀಡಲೆಂದು ತೆರಳಲು ಹೆಲಿಕಾಪ್ಟರ್‌ ಏರಿ, ಟೇಕ್‌ಆಫ್‌ ಮಾಡಿದ ಕೆಲ ಕ್ಷಣದಲ್ಲೇ ಹೆಲಿಕಾಪ್ಟರ್‌ ಪೈಲಟ್‌ನ ನಿಯಂತ್ರಣ ತಪ್ಪಿ ತಿರುಗಲಾರಂಭಿಸಿದೆ. 

ನಿಯಂತ್ರಣಕ್ಕೆ ಪಡೆಯಲು ಹರಸಾಹಸ ಪಟ್ಟಪೈಲಟ್‌ ಕಡೆಗೂ ಯಶಸ್ವಿಯಾದರು. ಅದೃಷ್ಟವಶಾತ್‌ ಸಂಸದ ಬಾಲಾಕಾಂತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಲಿಮ್ ಆಗೋಕೆ ಹೋಗಿ ಆರೋಗ್ಯವೇ ಹೋಯ್ತು: 11691 ರೂ ಪಾವತಿಸಿ ತೂಕ ಇಳಿಕೆ ಇಂಜೆಕ್ಷನ್ ಪಡೆದಾಕೆಗೆ ಆಘಾತ
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?