ಸರ್ಕಾರ ಪತನವಾದ್ದರಿಂದ ಸಂತಸವಾಗಿದೆ: ವಿಶ್ವನಾಥ್‌

Published : Jul 24, 2019, 08:05 AM ISTUpdated : Jul 24, 2019, 08:30 AM IST
ಸರ್ಕಾರ ಪತನವಾದ್ದರಿಂದ ಸಂತಸವಾಗಿದೆ: ವಿಶ್ವನಾಥ್‌

ಸಾರಾಂಶ

ರಾಜ್ಯದಲ್ಲಿ ರಾಕ್ಷಸ ರಾಜಕಾರಣ ಇತಿಶ್ರೀಯಾಗಿದೆ, ಸಾತ್ವಿಕ ರಾಜಕಾರಣ ಆರಂಭ| ಸರ್ಕಾರ ಪತನವಾದ್ದರಿಂದ ಸಂತಸವಾಗಿದೆ: ವಿಶ್ವನಾಥ್‌| 

ಬೆಂಗಳೂರು[ಜು.24]: ರಾಜ್ಯದಲ್ಲಿ ರಾಕ್ಷಸ ರಾಜಕಾರಣ ಇತಿಶ್ರೀಯಾಗಿದೆ, ಸಾತ್ವಿಕ ರಾಜಕಾರಣ ಆರಂಭವಾಗಬೇಕಿದೆ ಎಂದು ಅತೃಪ್ತ ಜೆಡಿಎಸ್‌ ಶಾಸಕ ಎಚ್‌. ವಿಶ್ವನಾಥ್‌ ಪ್ರತಿಕ್ರಿಯಿಸಿದ್ದಾರೆ.

ಮೈತ್ರಿ ಸರ್ಕಾರ ಪತನದ ನಂತರ ಪುಣೆಯಿಂದ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಪತನವಾಗಿರುವುದು ಸಂತಸ ತರಿಸಿದೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರಲಿಲ್ಲ. ಸರ್ಕಾರ ಪತನಗೊಳ್ಳಲಿದೆ ಎಂದು ನಮಗೆ ವಿಶ್ವಾಸ ಇತ್ತು. ಅದರಂತೆ ಸರ್ಕಾರ ಪತನವಾಗಿದೆ. ನಾವು ಪಕ್ಷಾಂತರ ಮಾಡಿಲ್ಲ. ಕೇವಲ ನಾಲ್ಕು ಜನಕ್ಕೆ ಮಾತ್ರ ಸೀಮಿತವಾಗಿದ್ದ ಸರ್ಕಾರದ ಸ್ವಾರ್ಥ ರಾಜಕಾರಣದಿಂದ ಬೇಸತ್ತಿದ್ದೆವು. ಸರ್ಕಾರ ಬೀಳಲು ಸಚಿವ ಸಾ.ರಾ. ಮಹೇಶ್‌ ಅವರೇ ಕಾರಣ. ಮುಂದಿನ ನಡೆ ಬಗ್ಗೆ ಎಲ್ಲರೂ ಒಟ್ಟಿಗೆ ಕುಳಿತು ಚರ್ಚೆ ಮಾಡುತ್ತೇವೆ. ಪ್ರಸ್ತುತ ಪುಣೆಯಲ್ಲಿದ್ದು, ಶೀಘ್ರ ಬೆಂಗಳೂರಿಗೆ ಬರುತ್ತೇವೆ ಎಂದು ತಿಳಿಸಿದರು.

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಕಳೆದ ಮೂರು ವಾರಗಳಿಂದ ಏನೇನಾಯ್ತು?

ತಾವು ಪಕ್ಷಕ್ಕೆ ದ್ರೋಹ ಮಾಡಿದ್ದಾಗಿ ಹೇಳಿರುವ ಸಿದ್ದರಾಮಯ್ಯ ಅವರೇ ಜೆಡಿಎಸ್‌ಗೆ ದ್ರೋಹ ಮಾಡಿ ಕಾಂಗ್ರೆಸ್‌ ಸೇರಿದ್ದಾರೆ, ಇವರು ಸಹ ಕೈ ಕೊಟ್ಟು ಬಂದವರೇ ಆಗಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ
ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?