
ಬೆಂಗಳೂರು[ಜು.02]: ಶಾಸಕರ ರಾಜೀನಾಮೆಯ ಮಾಸ್ಟರ್ ಮೈಂಡ್ ನಾನಲ್ಲ. ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಜೆಡಿಎಸ್ ಶಾಸಕ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಶ್ರೀಕಾಳಿಕಾಂಬ ದೇವರ ದರ್ಶನಕ್ಕಾಗಿ ಕೋಲ್ಕತ್ತಾಕ್ಕೆ ತೆರಳುವ ಮುನ್ನ ಸೋಮವಾರ ನಗರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಶಾಸಕ ಸ್ಥಾನಕ್ಕೆ ಆನಂದ್ಸಿಂಗ್ ರಾಜೀನಾಮೆ ನೀಡುತ್ತಿದ್ದಂತೆ ಅದರ ಮಾಸ್ಟರ್ಮೆಂಡ್ ವಿಶ್ವನಾಥ್ ಎಂಬ ವಂದಂತಿಗಳ ಹಬ್ಬಿದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿದರು.
ಯಾವುದೇ ಶಾಸಕರ ರಾಜೀನಾಮೆಗೂ, ನನಗೂ ಸಂಬಂಧ ಇಲ್ಲ. ನಾನಂತೂ ರಾಜೀನಾಮೆ ನೀಡುವುದಿಲ್ಲ. ನಾನು ಮಾಸ್ಟರ್ ಮೈಂಡ್ ಎಂಬುದು ಸತ್ಯಕ್ಕೆ ದೂರವಾದದ್ದು. ಜೆಡಿಎಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ಅಲ್ಲದೇ, ರಾಜೀನಾಮೆ ವಿಚಾರವು ಎಷ್ಟುನಿಜ ಎಂಬುದು ಸಹ ಗೊತ್ತಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.