
ನವದೆಹಲಿ (ಸೆ.14): ಅಮರನಾಥ್ ಯಾತ್ರಾ ದಾಳಿಯ ಮಾಸ್ಟರ್ ಮೈಂಡ್ ಲಷ್ಕರೆ ತೋಯ್ಬಾ ಕಮಾಂಡರ್ ಅಬು ಇಸ್ಮಾಯಿಲ್ ಹಾಗೂ ಇನ್ನೊಬ್ಬ ಉಗ್ರಗಾಮಿಯನ್ನು ಭದ್ರತಾ ಪಡೆಗಳು ಕಾಶ್ಮೀರದಲ್ಲಿಂದು ಎನ್'ಕೌಂಟರ್ ಮಾಡಿದ್ದಾರೆ.
ನಾಲ್ವರು ಮೋಸ್ಟ್ ವಾಂಟೆಡ್ ಉಗ್ರಗಾಮಿಗಳಲ್ಲಿ ಅಬು ಇಸ್ಮಾಯಲ್ ಕೂಡಾ ಒಬ್ಬನಾಗಿದ್ದು ಜುಲೈನಲ್ಲಿ ನಡೆದ ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿಯ ಮಾಸ್ಟರ್ ಮೈಂಡ್ ಇವನೇ ಆಗಿದ್ದ. ಇಂದು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಬು ಇಸ್ಮಾಯಿಲ್ ಮೃತಪಟ್ಟಿದ್ದಾನೆ.
ಕಾಶ್ಮೀರದ ಹೊರ ವಲಯದಲ್ಲಿರುವ ನೌಗಾಮ್ ಜಿಲ್ಲೆಯ ಔರಿಬಾಗ್'ನಲ್ಲಿ ಇಂದು ಸಂಜೆ 4.15 ರ ಸುಮಾರಿಗೆ ಭದ್ರತಾ ಪಡೆಗಳು ಎನ್'ಕೌಂಟರ್ ಶುರು ಮಾಡಿದರು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆ ಉಗ್ರರು ಒಂದು ಮನೆಯಲ್ಲಿ ಅವಿತಿಟ್ಟುಕೊಂಡರು. ಅರ್ಧತಾಸು ಕಾರ್ಯಾಚರಣೆ ಬಳಿಕ ಕಡೆಗೂ ಅಬು ಇಸ್ಮಾಯಿಲ್ ಹಾಗೂ ಅವನ ಸಹವರ್ತಿಯನ್ನು ಎನ್'ಕೌಂಟರ್ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.