ಶ್ರೀರಾಮನ ಹೆಸರು ಜನರನ್ನು ಬಡಿಯಲು ಬಳಕೆ: ಸೇನ್!

Published : Jul 06, 2019, 02:48 PM IST
ಶ್ರೀರಾಮನ ಹೆಸರು ಜನರನ್ನು ಬಡಿಯಲು ಬಳಕೆ: ಸೇನ್!

ಸಾರಾಂಶ

ಹಿಂಸೆಗಾಗಿ ಜೈ ಶ್ರೀರಾಮ್ ಘೋಷಣೆ ಬಳಕೆ ಆರೋಪ| ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್| ‘ಜನರನ್ನು ಥಳಿಸಲು ಜೈ ಶ್ರೀರಾಮ್ ಘೋಷಣೆ ಬಳಕೆ ವಿಷಾದ’| ಮಾ ದುರ್ಗೆ ಬಂಗಾಳ ಸಂಸ್ಕೃತಿಯ ಪ್ರತೀಕ ಎಂದ ಅಮರ್ತ್ಯ ಸೇನ್| ಜೈ ಶ್ರೀರಾಮ್ ಘೋಷಣೆ ಬಂಗಾಳದ ಸಂಸ್ಕೃತಿಯೊಂದಿಗೆ ಬೆರೆತಿಲ್ಲ|

ಕೋಲ್ಕತ್ತಾ(ಜು.06): ದೇಶದಲ್ಲಿ ಜೈ ಶ್ರೀರಾಮ್ ಘೋಷಣೆಯನ್ನು ಜನರನ್ನು ಥಳಿಸಲು ಬಳಸುತ್ತಿರುವುದು ದುರದೃಷ್ಟಕರ ಎಂದು  ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಖೇದ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಜಾಧವ್’ಪುರ್ ವಿವಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಸೇನ್, ಪ.ಬಂಗಾಳದಲ್ಲಿ ಮಾ ದುರ್ಗಾ ಸರ್ವವ್ಯಾಪಿಯಾಗಿದ್ದು, ಶ್ರೀರಾಮ್ ನಮ್ಮ ಸಂಸ್ಕೃತಿಯೊಂದಿಗೆ ಬೆರೆತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೈ ಶ್ರೀರಾಮ್ ಘೋಷಣೆಯನ್ನು ಜನರ ಮೇಲೆ ಹಲ್ಲೆ ಮಾಡಲು ಬಳಸಿಕೊಳ್ಳಾಗುತ್ತಿದೆ, ಆದರೆ ಬಂಗಾಳಿ ಸಂಸ್ಕೃತಿಯೊಂದಿಗೆ ಜೈ ಶ್ರೀರಾಮ್ ಘೋಷಣೆ ಬೆರೆತಿಲ್ಲ ಎಂದು ಸೇನ್ ನುಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು