
ಬೆಂಗಳೂರು[ನ.25] ರೆಬೆಲ್ ಸ್ಟಾರ್ ಅಂಬರೀಶ್ ನಿಧನವಾದ ಬೆನ್ನಲ್ಲೇ ನಗರದಲ್ಲಿ ಎರಡು ದಿನಗಳ ಕಾಲ ಮಧ್ಯ ನಿಷೇಧ ಮಾಡಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ದೇವರಾಜ್ ಹೇಳಿದ್ದಾರೆ.
'ಅಂಬಿ ಅಂತಿಮ ದರ್ಶನಕ್ಕೆ ಬರೋರಿಗೆ ವಿಶೇಷ ಬಸ್ ವ್ಯವಸ್ಥೆ, 3ದಿನ ಶೋಕಾಚರಣೆ'
ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದ್ದು, 600ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಕ್ರೀಡಾಂಗಣಕ್ಕೆ ನಿಯೋಜಿಸಲಾಗಿದೆ. ಈಗಾಗಲೇ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆ ಮಾಡಲಾಗಿದ್ದು, ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಇನ್ನು ಕಂಠೀರವ ಸ್ಟೇಡಿಯಂ ಸುತ್ತ ವಾಹನಗಳ ಪಾರ್ಕಿಂಗ್ ನಿಷೇಧ ಮಾಡಲಾಗಿದ್ದು, ಅಂಬಿ ದರ್ಶನಕ್ಕೆ ಬರುವವರು ಫ್ರೀಡಂ ಪಾರ್ಕ್ ಬಳಿ ವಾಹನ ಪಾರ್ಕ್ ಮಾಡಿ ಬರಬೇಕು ಎಂದು ಸಾರ್ವಜನಿಕರಿಗೆ ಡಿಸಿಪಿ ದೇವರಾಜ್ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.