
ಬೆಂಗಳೂರು: ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿರುವ ಬಗ್ಗೆ ನಟ, ಶಾಸಕ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.
ಇಂದು ಬಹಳ ದಿನಗಳ ಬಳಿಕ ವಿಧಾನಸೌಧಕ್ಕೆ ಬಂದಿದ್ದ ಅಂಬರೀಶ್, ಮಾಧ್ಯಮದವರೊಡನೆ ಮಾತನಾಡಿದರು.
ರಜನಿಕಾಂತ್ ರಾಜಕೀಯ ಪ್ರವೇಶ ಬಗ್ಗೆ ಪ್ರಶ್ನೆಗೆ, 'ಇವತ್ತೇ ಬರೆದು ಇಟ್ಟುಕೊಳ್ಳಿ, ಶೂರ್ ವಿನ್ನರ್' ಎಂದು ಹೇಳಿದ್ದಾರೆ.
ತಾನು ರಾಜಕೀಯಕ್ಕೆ ಪ್ರವೇಶಿಸುತ್ತಿರುವ ಬಗ್ಗೆ ಕಳೆದ ಡಿ.31 ರಂದು ರಜನಿಕಾಂತ್ ಅಧಿಕೃತವಾಗಿ ಘೋಷಿಸಿದ್ದಾರೆ.
ಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಂದ ತನ್ನ ಪಕ್ಷವು ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ.
ನಿನ್ನೆ ತನ್ನ ಪಕ್ಷದ ಅಧಿಕೃತ ಲೋಗೊವನ್ನು ಕೂಡಾ ಬಿಡುಗಡೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.