ವಿಶೇಷ ಅಧಿವೇಶನಕ್ಕೂ ಅಂಬರೀಶ್ ಗೈರು

Published : Sep 23, 2016, 06:03 AM ISTUpdated : Apr 11, 2018, 12:41 PM IST
ವಿಶೇಷ ಅಧಿವೇಶನಕ್ಕೂ ಅಂಬರೀಶ್ ಗೈರು

ಸಾರಾಂಶ

ಬೆಂಗಳೂರು(ಸೆ. 23): ಕಾವೇರಿ ಕಿಚ್ಚು ರಾಜ್ಯದಲ್ಲಿ ಹೊತ್ತಿ ಉರಿದು ಬೆಂದು ಹೋಗುತ್ತಿದ್ದರೂ ರೆಬೆಲ್ ಸ್ಟಾರ್ ಅಂಬರೀಶ್ ಸಂಪೂರ್ಣ ವಿಮುಖರಾಗಿದ್ದಾರೆ. ರೈತರ ಪ್ರತಿಭಟನೆಯಲ್ಲಿ ಒಮ್ಮೆಯೂ ಕಾಣಿಸಿಕೊಳ್ಳದ ಮಾಜಿ ಸಚಿವ ಅಂಬರೀಶ್ ಇದೀಗ ವಿಶೇಷ ಅಧಿವೇಶನದಲ್ಲೂ ಪಾಲ್ಗೊಳ್ಳದೇ ಗೈರಾಗಿದ್ದಾರೆ. ಅಮೆರಿಕದಲ್ಲಿರುವ ಅಂಬರೀಶ್ ಅವರು ಇಂದು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸುವ ನಿರೀಕ್ಷೆ ಇದೆ.

ರೈತರ ಕಾವೇರಿ ಹೋರಾಟದಲ್ಲಿ ಮಂಡ್ಯದ ಬಹುತೇಕ ಮುಖಂಡರು ಭಾಗವಹಿಸಿದ್ದರು. ಹೋರಾಟದಲ್ಲಿ ಅಂಬರೀಶ್ ಅನುಪಸ್ಥಿತಿಯು ಮಂಡ್ಯದ ಜನರಿಗೆ ಅಸಮಾಧಾನ ತಂದಿದೆ. ಅಂಬರೀಶ್ ವಿರುದ್ಧ ಸಾಕಷ್ಟು ಆಕ್ರೋಶವೂ ವ್ಯಕ್ತವಾಗಿದೆ. ರಾಜ್ಯಕ್ಕೆ ವಾಪಸ್ಸಾದ ಬಳಿಕ ಅಂಬರೀಶ್ ಕಾವೇರಿ ಹೋರಾಟದಲ್ಲಿ ಹೇಗೆ ಪಾಲ್ಗೊಳ್ಳುತ್ತಾರೆ ಹಾಗೂ ರಾಜ್ಯದ ಜನತೆಗೆ ಹೇಗೆ ಸಮಜಾಯಿಷಿ ನೀಡುತ್ತಾರೆ ಎಂದು ಕಾದುನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ