ಮಂಡ್ಯ ಕ್ಷೇತ್ರದಿಂದ ಮತ್ತೆ ಅಂಬರೀಶ್‌ ಸ್ಪರ್ಧೆ: ಆಪ್ತ

Published : Apr 06, 2018, 09:23 AM ISTUpdated : Apr 14, 2018, 01:13 PM IST
ಮಂಡ್ಯ ಕ್ಷೇತ್ರದಿಂದ ಮತ್ತೆ ಅಂಬರೀಶ್‌ ಸ್ಪರ್ಧೆ: ಆಪ್ತ

ಸಾರಾಂಶ

‘ಕಾಂಗ್ರೆಸ್‌ ಶಾಸಕ ಅಂಬರೀಶ್‌ ಶೀಘ್ರದಲ್ಲೇ ಮಂಡ್ಯಕ್ಕೆ ಬರಲಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವ ನಿರ್ಧಾರದಿಂದ ಅವರು ಹಿಂದೆ ಸರಿಯುವುದಿಲ್ಲ’ ಎಂದು ಬೆಂಬಲಿಗ ಅಮರಾವತಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಮಂಡ್ಯ : ‘ಕಾಂಗ್ರೆಸ್‌ ಶಾಸಕ ಅಂಬರೀಶ್‌ ಶೀಘ್ರದಲ್ಲೇ ಮಂಡ್ಯಕ್ಕೆ ಬರಲಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವ ನಿರ್ಧಾರದಿಂದ ಅವರು ಹಿಂದೆ ಸರಿಯುವುದಿಲ್ಲ’ ಎಂದು ಬೆಂಬಲಿಗ ಅಮರಾವತಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಈ ಕುರಿತು ಇಂದು ಅಥವಾ ನಾಳೆ ಅಂಬರೀಶ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಅಂಬರೀಶ್‌ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಕೈಪಿಡಿಯನ್ನು ಬಿಡುಗಡೆ ಮಾಡುತ್ತೇವೆ. ಅವರು ಆರೋಗ್ಯವಾಗಿದ್ದಾರೆ. ಕ್ಷೇತ್ರದಲ್ಲಿ ಅಂಬಿಗೆ ಪ್ರಬಲ ಪ್ರತಿಸ್ಪರ್ಧಿ ಯಾರೂ ಇಲ್ಲ. ಅವರು ಹೇಳಿದರೆ ಚುನಾವಣೆಯಲ್ಲಿ ನಾನೂ ಸ್ಪರ್ಧಿಸಲು ಸಿದ್ಧನಿದ್ದೇನೆ’ ಎಂದರು.

ಅಂಬರೀಶ್‌ ಅವರು ಆರೋಗ್ಯದ ಕಾರಣ ನೀಡಿ ಮಂಡ್ಯದಿಂದ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಅವರ ಆಪ್ತನ ಹೇಳಿಕೆಗೆ ಮಹತ್ವ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!