
ಮಂಡ್ಯ : ಟಿಕೆಟ್ ಕೊಡುತ್ತೇವೆ ಎಂದರೂ ಕೂಡ ಅಂಬರೀಷ್ ಕೈಗೆ ಸಿಗುತ್ತಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಕೈ ಟಿಕೆಟ್ ಆಯ್ಕೆ ವಿಚಾರದಲ್ಲಿ ಅಂಬಿ ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಂಡ್ಯದಲ್ಲಿ ತಮಗೆ ಮಾತ್ರ ಟಿಕೆಟ್ ಕೊಟ್ಟರೆ ಸಾಲದು, ತಮ್ಮ ಬೆಂಬಲಿಗರಿಗೂ ಕೂಡ ಟಿಕೆಟ್ ನೀಡಬೇಕು ಎಂದು ಅಂಬಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್ ಪೇಟೆಯಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿ ಎಂದು ಅಂಬರೀಷ್ ಕೇಳುತ್ತಿದ್ದಾರೆ. ಶ್ರೀರಂಗಪಟ್ಟಣದಿಂದ ಪುಟ್ಟೇಗೌಡ, ಕೆ.ಆರ್ ಪೇಟೆಯಲ್ಲಿ ಕಿಕ್ಕೇರೆ ಸುರೇಶ್, ಪಾಂಡವಪುರದಲ್ಲಿ ಎಲ್.ಡಿ ರವಿಗೆ ಟಿಕೆಟ್ ನೀಡಬೇಕು ಎಂದು ಅಂಬರೀಷ್ ಬೇಡಿಕೆ ಇಟ್ಟಿದ್ದಾರೆ.
ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಟ್ಟರೆ ಮಾತ್ರ ತಾವು ಮಂಡ್ಯದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಅಂಬರೀಷ್ ಹೇಳಿದ್ದಾರೆ. ಶ್ರೀರಂಗಪಟ್ಟಣದಲ್ಲಿ ರಮೇಶ್ ಬಂಡಿಸಿದ್ದೇಗೌಡ, ಪಾಂಡವಪುರದಲ್ಲಿ ಪುಟ್ಟಣಯ್ಯ ಅವರ ಪುತ್ರನಿಗೆ ಟಿಕೆಟ್ ಫೈನಲ್ ಆಗಿದ್ದು, ಕಾಂಗ್ರೆಸ್ ಈ ನಿರ್ಧಾರಕ್ಕೆ ಅಂಬರೀಷ್ ರೆಬಲ್ ಆಗಿದ್ದಾರೆ. ಸದ್ಯ ಈ ಸಂಬಂಧ ಅಂಬರೀಷ್ ಜೊತೆ ಸಂಧಾನ ಮಾತುಕತೆ ನಡೆಸಲು ಕಾಂಗ್ರೆಸ್ ಮುಖಂಡರು ತೀರ್ಮಾನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.