
ಮಂಡ್ಯ(ಮಾ.31): ನಾನು ಯಾವತ್ತೂ ಟಿಕೆಟ್'ಗಾಗಿ ಅರ್ಜಿ ಹಾಕಿದವನಲ್ಲ, ಹಾಕೋದು ಇಲ್ಲ ಎಂದು ಮಾಜಿ ಸಚಿವ ಅಂಬರೀಶ್ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್'ಗೆ ಖಡಕ್ ಆಗಿ ಉತ್ತರಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಕರೆ ಮಾಡಿದ ಅಂಬರೀಶ್, ಅಪ್ಪಾಜಿ ಅವರನ್ನು ಮಂಡ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದೇ ವೇಳೆ ಪರಮೇಶ್ವರ್ ಟಿಕೆಟ್ ಬಗ್ಗೆ ಪ್ರಸ್ತಾಪಿಸಿದಾಗ, ಅಂಬರೀಶ್ ಬೇಕು ಎಂದು ಜನರು ಇಚ್ಚಿಸಿದ್ರೆ, ಪಕ್ಷಕ್ಕೆ ಬೇಕು ಅನಿಸಿದ್ರೆ ಟಿಕೆಟ್ ಕೊಡಿ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
ನಾನಂತೂ ಬಂದು 'ಬಿ' ಫಾರ್ಮ್ ತಗೆದುಕೊಳ್ಳಲ್ಲ, ಟಿಕೆಟ್'ಗೂ ಅರ್ಜಿ ಹಾಕಲ್ಲ. ಬೇಕಿದ್ರೆ ಟಿಕೆಟ್ ಕೊಡಿ, ಬೇಡವಾದ್ರೆ ನಿಮಗಿಷ್ಟ ಬಂದವರಿಗೆ ಕೊಟ್ಕೊಳಿ ಹೋಗಿ ಎಂದು ಅಂಬಿ ಡಿಟ್ಟವಾಗಿ ಉತ್ತರಿಸಿದ್ದಾರೆ. ಅಂಬರೀಶ್ ಈ ನಿಗೂಢ ನಡೆಗೆ ಕೆಪಿಸಿಸಿ ಅಧ್ಯಕ್ಷರಿಗೆ ತಲೆಬಿಸಿ ಮಾಡಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.