ಜೆಡಿಎಸ್ ನಿಂದ ಅಂಬರೀಷ್ ಕಣಕ್ಕೆ ..?

By Web DeskFirst Published Jul 29, 2018, 10:05 AM IST
Highlights

ರೆಬೆಲ್ ಸ್ಟಾರ್ ಅಂಬರೀಷ್ ರಾಮನಗರ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದ್ದು, ಅವರ ವಿರುದ್ಧ ಕಾಂಗ್ರೆಸ್ ನಿಂದ ತಾವೆ ಕಣಕ್ಕೆ ಇಳಿಯುವುದಾಗಿ ವಿಧಾನಪರಿಷತ್ ಸದಸ್ಯ  ಎಂ. ಲಿಂಗಪ್ಪ ತಿಳಿಸಿದ್ದಾರೆ.

ರಾಮನಗರ: ಒಂದೊಮ್ಮೆ ರಾಮನಗರ ಉಪಚುನಾವಣೆಗೆ ಜೆಡಿಎಸ್‌ನಿಂದ ನಟ ಅಂಬರೀಶ್ ಕಣಕ್ಕಿಳಿದರೆ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಈ ವಿಷಯದಲ್ಲಿ ನಮ್ಮ ಪಕ್ಷದ ವರಿಷ್ಠರು ಅನುಮತಿ ನೀಡದಿದ್ದರೂ ನಾಮಪತ್ರ ಸಲ್ಲಿಸಲು ಸಿದ್ಧ ಎಂದು ವಿಧಾನಪರಿಷತ್ ಸದಸ್ಯ  .ಎಂ. ಲಿಂಗಪ್ಪ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಗಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಭಾಗಿದಾರರಲ್ಲ. ಈಗಿರುವ ಹೊಂದಾಣಿಕೆ ವ್ಯವಸ್ಥೆ ನಮ್ಮ ಆತ್ಮಕ್ಕೆ ಒಪ್ಪಿಗೆ ಆಗುತ್ತಿಲ್ಲ. ರಾಮನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಇರುವುದಿಲ್ಲ. 

ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರನ್ನು ಉಪ ಚುನಾವಣೆಯಲ್ಲಿ ಕಣಕ್ಕಿಳಿಸಲಾಗುವುದು. ಕಾಂಗ್ರೆಸ್ ಅಭ್ಯರ್ಥಿಯಾಗಲು ಮೊದಲ ಆಯ್ಕೆ ಮತ್ತು ಅವಕಾಶ ಅವರಿಗೆ ಮೀಸಲು. ಅವರು ಒಪ್ಪದಿದ್ದರೆ ಪಕ್ಷದಲ್ಲಿ ಚರ್ಚಿಸಿ ಬೇರೊಬ್ಬರಿಗೆ ಅವಕಾಶ ನೀಡಲಾಗುವುದು ಎಂದರು.

click me!