ಜನಾರ್ದನ ರೆಡ್ಡಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರ ಜೈಲೇ ಗತಿ..!

Published : Nov 11, 2018, 04:14 PM ISTUpdated : Nov 11, 2018, 05:14 PM IST
ಜನಾರ್ದನ ರೆಡ್ಡಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರ ಜೈಲೇ ಗತಿ..!

ಸಾರಾಂಶ

ಅಂಬಿಡೆಂಟ್ ಹಗರದ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು, [ನ.11]: ಅಂಬಿಡೆಂಟ್ ಹಗರದ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಂದು [ಭಾನುವಾರ] 1ನೇ ಎಸಿಎಂಎಂ ನ್ಯಾಯಧೀಶ ಜಗದೀಶ್ ಅವರು ಇನ್ನಷ್ಟು ಹೆಚ್ಚಿನ ವಿಚಾರಣೆಗೆ ರೆಡ್ಡಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದ್ದಾರೆ.

ಆಂಬಿಡೆಂಟ್ & ರೆಡ್ಡಿ: ಸುವರ್ಣನ್ಯೂಸ್‌ನಿಂದ Super Exclusive ವರದಿಗಳ ಸರಮಾಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿಯನ್ನು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಗಾಗಿ ರೆಡ್ಡಿಯನ್ನು ಬಂಧಿಸಿದ್ದರು. ಬಳಿಕ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ರೆಡ್ಡಿಯನ್ನು ಕೋರಮಂಗಲದ 1ನೇ ಎಸಿಎಂಎಂ ನ್ಯಾಯಧೀಶ ಜಗದೀಶ್​ ಅವರ ನಿವಾಸಕ್ಕೆ ಕರೆತರಲಾಗಿತ್ತು.

ಇಂದು ಭಾನುವಾರದ ಇರೋದ್ರಿಂದ ನ್ಯಾಯಾಧೀಶರ ಮನೆಗೆ ಕರೆದೊಯ್ಯಲಾಗಿತ್ತು ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜನಾರ್ದನ ರೆಡ್ಡಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ನವೆಂಬರ್ 24ರ ವರೆಗೆ ನ್ಯಾಯಾಂಗ ಬಂಧನ ನ್ಯಾಯಾಧೀಶ ಜಗದೀಶದ ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತಚೋರಿ ವಿರುದ್ಧ ದಿಲ್ಲೀಲಿಂದು ಕಾಂಗ್ರೆಸ್‌ ಬೃಹತ್‌ ಆಂದೋಲನ: ಖರ್ಗೆ, ರಾಹುಲ್‌, ಸಿದ್ದು, ಡಿಕೆಶಿ ಭಾಗಿ
ಮೋದಿ, ಆರ್‌ಸಿ ಮೋಡಿ.. ಕೇರಳದಲ್ಲಿ ಮೊದಲ ಸಲ ಪಾಲಿಕೆ ಚುನಾವಣೇಲಿ ಬಿಜೆಪಿ ಜಯಭೇರಿ