‘ಎ.ಸಿ. ಸಮಸ್ಯೆಯಿಂದ ಕಲಾಪಕ್ಕೆ ಬಂದಿರಲಿಲ್ಲ!'

Published : May 28, 2017, 09:10 PM ISTUpdated : Apr 11, 2018, 01:11 PM IST
‘ಎ.ಸಿ. ಸಮಸ್ಯೆಯಿಂದ ಕಲಾಪಕ್ಕೆ ಬಂದಿರಲಿಲ್ಲ!'

ಸಾರಾಂಶ

ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಜೂನ್‌ 5ರಿಂದ 16ರವರೆಗೆ 10 ದಿನಗಳ ಕಾಲ ನಡೆಯಲಿದ್ದು, ಈ ಕುರಿತು ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ.

ಬೆಂಗಳೂರು(ಮೇ.28): ಅನಾರೋಗ್ಯದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪದಲ್ಲಿ ಸರಿಯಾಗಿ ಹಾಜರಾಗಲು ಆಗಲಿಲ್ಲ ಎಂದು ಶಾಸಕ ಅಂಬರೀಷ್‌ ಸ್ಪಷ್ಟನೆ ನೀಡಿದ್ದಾರೆ. ಸದನದಲ್ಲಿನ ಹವಾನಿಯಂತ್ರಿತ ವ್ಯವಸ್ಥೆ ನನ್ನ ಆರೋಗಕ್ಕೆ ಸರಿಹೊಂದುತ್ತಿ​ರಲಿಲ್ಲ. ಆದ್ದರಿಂದ ಅನಾ​ರೋಗ್ಯಕ್ಕೀಡಾಗಿ ಹಿಂದಿನ ಅಧಿವೇಶನಗಳಿಗೆ ಹಾಜರಾ​ಗಲಿಲ್ಲ. ಇತ್ತೀಚಿಗೆ ಚಿಕಿತ್ಸೆ ಪಡೆದು ಬಂದಿದ್ದೇನೆ. ಜೂನ್‌ 5ರಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ತಪ್ಪದೆ ಭಾಗವಹಿಸುತ್ತೇನೆ ಎಂದು ಅವರು ಸ್ಪೀಕರ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಜೂನ್‌ 5ರಿಂದ 10 ದಿನ ಅಧಿವೇಶನ

ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಜೂನ್‌ 5ರಿಂದ 16ರವರೆಗೆ 10 ದಿನಗಳ ಕಾಲ ನಡೆಯಲಿದ್ದು, ಈ ಕುರಿತು ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಜೂನ್‌ 5ರಿಂದ 9ರವರೆಗೆ ಹಾಗೂ ಜೂನ್‌ 12ರಿಂದ 16ರವರೆಗೆ ಒಟ್ಟು 10 ದಿನಗಳ ಕಾಲ ಸರ್ಕಾರಿ ಹಾಗೂ ಖಾಸಗಿ ಕಾರ್ಯಕಲಾಪಗಳು ನಡೆಯಲಿದ್ದು, ಜೂನ್‌ 10 ಎರಡನೇ ಶನಿವಾರ ಹಾಗೂ ಜೂನ್‌ 11ರಂದು ಭಾನುವಾರ ಸರ್ಕಾರಿ ರಜೆ ನಿಮಿತ್ತ ಕಲಾಪ ನಡೆಯುವುದಿಲ್ಲ ಎಂದು ತಾತ್ಕಾಲಿಕ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
ಧೋನಿಯನ್ನೇ ಬೆರಗುಗೊಳಿಸಿದ 4ರ ಪೋರಿಯ ಬ್ಯಾಟಿಂಗ್: ವೀಡಿಯೋ ವೈರಲ್