ಬೆಂಗಳೂರು(ಸೆ.17): ಜೀವ ಉಳಿಸಬೇಕಿದ್ದ ಆಂಬುಲೆನ್ಸ್ ವಾಹನ ಒನ್ವೇನಲ್ಲಿ ಬಂದು ಅಮಾಯಕನ ಜೀವ ತೆಗೆದ ಘಟನೆ ಬೆಂಗಳೂರಿನ ಬಿಇಎಲ್ ಸರ್ಕಲ್ ಲೊಟ್ಟೆಗೊಲ್ಲಹಳ್ಳಿ ಬಳಿ ನಡೆದಿದೆ.
ಒನ್ ವೇನಲ್ಲಿ ವೇಗವಾಗಿ ಬಂದ ಆಂಬುಲೆನ್ಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಎ.ಎನ್ ಕುಮಾರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಆಂಬುಲೆನ್ಸ್ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಜಾಲಹಳ್ಳಿ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಜಾಲಹಳ್ಳಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.