
ಅಮೇಥಿ[ಮಾ. 05] ಕಾಂಗ್ರೆಸ್ ರಾಹುಲ್ ಗಾಂಧಿ ಅವರ ಕ್ಷೇತ್ರ ಅಮೇಥಿಯಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಬಡ ರೋಗಿಯೊಬ್ಬರಿಗೆ ಚಿಕಿತ್ಸೆ ನಿರಾಕರಣೆ ಮಾಡಲಾಗಿದ್ದು ರೋಗಿ ಸಾವನ್ನಪ್ಪಿದ್ದಾನೆ.
ಜಿಲ್ಲೆಯಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಹೋಗಲಾಗಿದೆ. ರೋಗಿ ಬಳಿ ಕೇಂದ್ರ ಸರ್ಕಾರ ಕೊಡಮಾಡಿದ್ದ ಆಯುಷ್ಮಾನ್ ಭಾರತ್ ಯೋಜನೆಯ ಕಾರ್ಡ್ ಇತ್ತು. ಆದರೆ ಅಲ್ಲಿನ ವೈದ್ಯರು ಈ ಆಸ್ಪತ್ರೆ ರಾಹುಲ್ ಗಾಂಧಿ ಅವರದ್ದು, ಪಿಎಂ ಮೋದಿ ಅಥವಾ ಸಿಎಂ ಯೋಗಿ ಅವರದ್ದಲ್ಲ, ಕಾರ್ಡ್ ಇಲ್ಲಿ ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ.
ಆಯುಷ್ಮಾನ್ ಭಾರತ ಯೋಜನೆಯ ಸಂಪೂರ್ಣ ವಿವರ
ಈ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಟ್ವೀಟ್ ಮಾಡಿ ನೊಂದ ಕುಟುಂಬದ ಕಣ್ಣೀರನ್ನು ಹಂಚಿಕೊಂಡಿದ್ದಾರೆ. ಮೋದಿ ಸರಕಾರದ ಆಯುಷ್ಮಾನ್ ಭಾರತ್ ಕಾರ್ಡ್ ಇದ್ದ ಕಾರಣಕ್ಕೆ ಒಬ್ಬ ಬಡವನನ್ನು ಸಾಯಲು ಬಿಡುತ್ತಾರೆ ಎಂದು ನಾವು ಯಾವ ಕಾಲದಲ್ಲಿಯೂ ಯೋಚನೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.