ಜನಜಂಗುಳಿ, ವಿಚಾರಣೆ ಬಿಸಿಗೆ ಕಂಗೆಟ್ಟು ಕೋರ್ಟ್‌ನಲ್ಲಿ ಎಸಿ ಕೋರಿದ ಅಂಬಾನಿ!

Published : Feb 14, 2019, 12:50 PM IST
ಜನಜಂಗುಳಿ, ವಿಚಾರಣೆ ಬಿಸಿಗೆ ಕಂಗೆಟ್ಟು ಕೋರ್ಟ್‌ನಲ್ಲಿ ಎಸಿ ಕೋರಿದ ಅಂಬಾನಿ!

ಸಾರಾಂಶ

ಜನಜಂಗುಳಿ, ವಿಚಾರಣೆ ಬಿಸಿಗೆ ಕಂಗೆಟ್ಟು ಕೋರ್ಟ್‌ನಲ್ಲಿ ಎಸಿ ಕೋರಿದ ಅಂಬಾನಿ!| ಸುಪ್ರೀಂಕೋರ್ಟ್‌ ಮುಂದೆ ವಿಚಾರಣೆಗೆ ಹಾಜರು

ನವದೆಹಲಿ[ಫೆ.14]: ಎರಿಕ್ಸನ್‌ ಇಂಡಿಯಾ ಕಂಪನಿ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್‌ ಕಮ್ಯುನಿಕೇಷನ್ಸ್‌ ಮುಖ್ಯಸ್ಥ ಅನಿಲ್‌ ಅಂಬಾನಿ ಬುಧವಾರ ಸುಪ್ರೀಂಕೋರ್ಟ್‌ ಮುಂದೆ ವಿಚಾರಣೆಗೆ ಹಾಜರಾಗಿದ್ದರು. 2013ರಲ್ಲಿ 2ಜಿ ಪ್ರಕರಣದಲ್ಲಿ ಪಟಿಯಾಲಾ ಕೋರ್ಟ್‌ನಲ್ಲಿ ವಿಚಾರಣೆಗೆ ಹಾಜರಾದ ಬಳಿಕ ಮೊದಲ ಬಾರಿಗೆ ಕೋರ್ಟ್‌ ರೂಮ್‌ಗೆ ಬಂದ ಅಂಬಾನಿ ಒತ್ತಡಕ್ಕೆ ಒಳಗಾದಂತೆ ಕಂಡು ಬಂದರು.

ಜನರಿಂದ ಕಿಕ್ಕಿರಿದಿದ್ದ ಕೋರ್ಟ್‌ನಲ್ಲಿ ಕುಳಿತು ಬೆವರುತ್ತಿದ್ದ ಅನಿಲ್‌ ಅಂಬಾನಿ, ತಮ್ಮ ವಕೀಲರಿಗೆ ಕೋರ್ಟ್‌ನಲ್ಲಿ ಏ.ಸಿ.ಯನ್ನು ಏಕೆ ಹಾಕಿಲ್ಲ ಎಂದು ಪ್ರಶ್ನಿಸಿದ ಪ್ರಸಂಗವೂ ನಡೆದಿದೆ. ಆದರೆ, ಇದಕ್ಕೆ ಕೋರ್ಟ್‌ ನಿಯಮಾವಳಿಯ ಪ್ರಕಾರ ಮಾಚ್‌ರ್‍ನಲ್ಲಿ ಮಾತ್ರ ಏ.ಸಿ. ಆನ್‌ ಮಾಡಲಾಗುತ್ತದೆ ಎಂಬ ಉತ್ತರ ಬಂತು. 10.30ಕ್ಕೆ ನ್ಯಾಯಾಧೀಶರು ಆಗಮಿಸಿದ ಬಳಿಕ ತಮ್ಮ ಕೇಸಿನ ವಿಚಾರಣೆ ಶುರುವಾಗಬಹುದು ಎಂದು ಅಂಬಾನಿ ಕಾಯುತ್ತಲೇ ಇದ್ದರು. ಆದರೆ, 12 ಗಂಟೆಯಾದರೂ ನ್ಯಾಯಾಧೀಶರು ಅಂಬಾನಿ ಅವರನ್ನು ವಿಚಾರಣೆಗೆ ಕರೆದಿರಲಿಲ್ಲ.

ಅಂತೂ ಎರಿಕ್ಸನ್‌ ಕೇಸ್‌ ಅನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಯಾಧೀಶರು, ಕೆಲವೇ ನಿಮಿಷಗಳ ವಿಚಾರಣೆ ನಡೆಸಿ ಪ್ರಕರಣವನ್ನು ಬುಧವಾರಕ್ಕೆ ಮುಂದೂಡಿದ್ದು, ವಿಚಾರಣೆಗೆ ಖುದ್ದು ಹಾಜರಾಗುವಂತೆ ಅನಿಲ್‌ ಅಂಬಾನಿಗೆ ಕೋರ್ಟ್‌ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!
ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!