
ನವದೆಹಲಿ[ಸೆ.10]: ಯಾವುದೇ ಕಾರಣಕ್ಕೂ ಪೆಟ್ರೋಲ್ ಮೇಲಿನ ಸುಂಕವನ್ನು ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ದರ ಏರಿಕೆ ವಿರೋಧಿಸಿ ಬಂದ್ ಗೆ ಕರೆ ನೀಡಿದ್ದ ವಿರೋಧ ಪಕ್ಷಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪೆಟ್ರೋಲ್ ಬೆಲೆ ಏರಿಕೆ, ಇಳಿಕೆ ಕೇಂದ್ರದ ಕೈನಲ್ಲಿ ಇಲ್ಲ. ತೈಲ ಕಂಪನಿಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಈಗಾಗಲೇ ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.
ತೈಲ ಉತ್ಫಾದನಾ ರಾಷ್ಟ್ರಗಳ ಮೇಲೆ ಭಾರತ ಸರ್ಕಾರದ ಹಿಡಿತ ಇರುವುದಿಲ್ಲ. ಕಾಂಗ್ರೆಸ್ ನಿಂದ ಭಾರತ ಬಂದ್ ನಡೆಸುತ್ತಿರುವ ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಬಿಹಾರದಲ್ಲಿ ಪ್ರತಿಭಟನೆ ವೇಳೆ ಆ್ಯಂಬುಲೆನ್ಸ್ ನಲ್ಲಿದ್ದ ಮಗು ಸಾವನ್ನಪ್ಪದ್ದಕ್ಕೆ ತೀವ್ರವಾಗಿ ಖಂಡಿಸಿದರು. ದೇಶದಲ್ಲಿ ಹಿಂಸಾ ತಾಂಡವ ಹಾಗೂ ಸಾವಿನ ಆಟ ಬಂದ್ ಆಗಬೇಕು. ಜನರಲ್ಲಿ ನೋವು ಇರಬಹುದು ಆದರೆ ಈ ಬಂದ್ ಗೆ ಬೆಂಬಲ ನೀಡಿಲ್ಲ. ಜನರ ತೊಂದರೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಜನರ ಜತೆ ಇದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.