ಇಂದಿನಿಂದ ಕಲಾಪ ಆರಂಭ : ಕಾಂಗ್ರೆಸ್ -ಜೆಡಿಎಸ್ ಶಾಸಕರಿಗೆ ವಿಪ್

Published : Jul 12, 2019, 07:24 AM IST
ಇಂದಿನಿಂದ ಕಲಾಪ ಆರಂಭ : ಕಾಂಗ್ರೆಸ್ -ಜೆಡಿಎಸ್ ಶಾಸಕರಿಗೆ ವಿಪ್

ಸಾರಾಂಶ

ರಾಜ್ಯ ರಾಜಕೀಯ ಹೈ ಡ್ರಾಮಾ ನಡುವೆ ಇಂದಿನಿಂದ ರಾಜ್ಯದಲ್ಲಿ ಅಧಿವೇಶನ ಆರಂಭವಾಗುತ್ತಿದೆ. ಇದರ ಮಧ್ಯೆ ಎಲ್ಲಾ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. 

ಬೆಂಗಳೂರು [ಜು.12] :  ಅತೃಪ್ತ ಶಾಸಕರ ರಾಜೀನಾಮೆ ಕುರಿತ ನಿರ್ಧಾರ ಇತ್ಯರ್ಥಗೊಳ್ಳದಿರುವ ಮಧ್ಯೆಯೇ ಶುಕ್ರವಾರದಿಂದ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರಿಗೆ ವಿಪ್‌ ಜಾರಿಗೊಳಿಸಲಾಗಿದೆ.

ಶಾಸಕರು ಶುಕ್ರವಾರದಿಂದ ಈ ತಿಂಗಳ 26ರವರೆಗೆ ನಡೆಯುವ ಪ್ರತಿದಿನದ ಕಲಾಪದಲ್ಲಿ ಕಡ್ಡಾಯವಾಗಿ ಉಪಸ್ಥಿತರಿದ್ದು, ಅಲ್ಲಿ ಮಂಡನೆಯಾಗುವ ವಿತ್ತೀಯ ವಿಧೇಯಕಗಳು, ಶಾಸನಗಳು ಮತ್ತು ಇತರ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸರ್ಕಾರದ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ವಿಪ್‌ನಲ್ಲಿ ಸೂಚಿಸಲಾಗಿದೆ.

ಇದೀಗ ಆಡಳಿತಾರೂಢ ಪಕ್ಷಗಳ ಒಟ್ಟು 16 ಶಾಸಕರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಅಂಗೀಕಾರಗೊಂಡಿಲ್ಲ. ಹೀಗಾಗಿ, ತಾವು ರಾಜೀನಾಮೆ ನೀಡಿರುವುದರಿಂದ ಅಧಿವೇಶನದ ಕಲಾಪದಿಂದ ದೂರ ಉಳಿಯಬೇಕೊ ಅಥವಾ ವಿಪ್‌ ಉಲ್ಲಂಘನೆಯ ಕ್ರಮಕ್ಕೆ ಹೆದರಿ ಸದನಕ್ಕೆ ಆಗಮಿಸಬೇಕೊ ಎಂಬ ಗೊಂದಲ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಅಧಿವೇಶನದ ಮೊದಲ ದಿನವಾದ ಶುಕ್ರವಾರ ಸಂತಾಪ ಸೂಚನೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಸೂಚಿ ಇಲ್ಲ. ಹೀಗಾಗಿ, ಸರ್ಕಾರಕ್ಕೆ ಪ್ರತಿಪಕ್ಷದಿಂದ ಹೆಚ್ಚು ಸಂಕಷ್ಟಎದುರಾಗುವ ಸಾಧ್ಯತೆ ಕಡಮೆ. ಆದರೆ, ಸೋಮವಾರದಿಂದ ಅಧಿವೇಶನದ ಕಲಾಪ ಸಕ್ರಿಯವಾಗಿ ನಡೆಯುವುದರಿಂದ ಆಗ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವುದು ನಿಶ್ಚಿತವಾಗಿದೆ.

ಇದೆಲ್ಲದರ ನಡುವೆ ಶುಕ್ರವಾರ ಸುಪ್ರೀಂಕೋರ್ಟ್‌ನಲ್ಲಿ ಅತೃಪ್ತ ಶಾಸಕರ ರಾಜೀನಾಮೆ ಕುರಿತ ಅರ್ಜಿಯ ವಿಚಾರಣೆ ಏನಾಗುತ್ತದೆ ಎಂಬುದು ಕುತೂಹಲಕರವಾಗಿದೆ. ಅದರ ಆಧಾರದ ಮೇಲೆಯೇ ಸೋಮವಾರದಿಂದ ಅಧಿವೇಶನದ ದಿಕ್ಕು ನಿರ್ಧಾರವಾಗುವ ಸಂಭವ ಹೆಚ್ಚಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಕಂಡೋರ ಹೆಂಡ್ತಿಯನ್ನು ಪಟಾಯಿಸಿದ ಪೊಲೀಸಪ್ಪ; ಇದು ರೀಲ್ಸ್ ಅಂಟಿಯ ಮೋಹದ ಕಥೆ
ಬೆಂಗಳೂರಿನಲ್ಲಿ ಜಿಮ್‌ಗೆ ಹೋದ್ರೆ, ಚಿಕನ್‌ ತಿಂದ್ರೆ ಮ್ಯಾನೇಜರ್‌ ನಗ್ತಾರೆ: NRI ಪೋಸ್ಟ್‌ನಿಂದ ಆಘಾತಕಾರಿ ಸತ್ಯ ಬಯಲು!