
ನವದೆಹಲಿ(ಜೂ.07): ಸಚಿವ ಸಮಿತಿ ಪುನರ್ ರಚನೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ ವಿವಾದ ಇದೀಗ ಸುಖಾಂತ್ಯ ಕಂಡಿದೆ. ರಾಜನಾಥ್ ಅವರಿಗೆ ಪ್ರಮುಖ ಸಮಿತಿಗಳಲ್ಲಿ ಸ್ಥಾನ ನೀಡಿ ವಿವಾದಕ್ಕೆ ಇತ್ರಿಶ್ರೀ ಹಾಡಲಾಗಿದೆ.
ಸಚಿವ ಸಮಿತಿ ಪುನರ್ ರಚನೆ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಡೆಗಣಿಸಿದ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. 8 ಸಚಿವ ಸಂಪುಟ ಸಮಿತಿ ಪೈಕಿ ಕೇವಲ 2 ಸಮಿತಿಗಳಲ್ಲಿ ರಾಜನಾಥ್ ಸಿಂಗ್ ಅವರಿಗೆ ಸ್ಥಾನ ನೀಡಲಾಗಿತ್ತು.
ಇದೀಗ 6 ಸಂಪುಟ ಸಮಿತಿಗಳಲ್ಲಿ ರಾಜನಾಥ್ ಅವರಿಗೆ ಸ್ಥಾನ ನೀಡಲಾಗಿದ್ದು, ಪ್ರಧಾನಿ ಮೋದಿ ಅವರ ತುರ್ತು ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಕೇವಲ 2 ಸಂಪುಟ ಸಮಿತಿಗಳಲ್ಲಿ ಸ್ಥಾನ ನೀಡಿದ್ದಕ್ಕೆ ರಾಜನಾಥ್ ಕೋಪಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಕೇಂದ್ರ ಸರ್ಕಾರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ವಿವಾದ ತಣ್ಣಗಾಗಿದೆ.
ಸಾರ್ವಜನಿಕ ಮಾಹಿತಿ ವಿಭಾಗ(ಪಿಐಬಿ) ಮೊದಲ ಪಟ್ಟಿ ಬಿಡುಗಡೆ ಮಾಡಿದಾಗ ಭದ್ರತೆ ಮತ್ತು ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ಮಾತ್ರ ರಾಜನಾಥ್ ಹೆಸರು ಇತ್ತು. ಇದೀಗ ಪರಿಷ್ಕೃತ ಪಟ್ಟಿಯಲ್ಲಿ ಸಂಸದೀಯ ವ್ಯವಹಾರ, ರಾಜಕೀಯ ವ್ಯವಹಾರ, ಹೂಡಿಕೆ ಮತ್ತು ಬೆಳವಣಿಗೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಸಮಿತಿಗಳಲ್ಲೂ ರಾಜನಾಥ್ ಅವರಿಗೆ ಸ್ಥಾನ ನೀಡಲಾಗಿದೆ.
ಇನ್ನು ಎಲ್ಲಾ ಎಂಟು ಸಮಿತಿಗಳಲ್ಲಿ ಗೃಹ ಸಚಿವ ಅಮಿತ್ ಶಾ ಮಾತ್ರ ಸ್ಥಾನ ಪಡೆದಿರುವುದು ವಿಶೇಷ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.