ಮುಗಿಯದ ಹೈಡ್ರಾಮ, ರಾಜಭವನ ಅಂಗಣದಲ್ಲಿ ಅಧಿಕಾರದ ಚೆಂಡು

Published : Feb 13, 2017, 02:54 PM ISTUpdated : Apr 11, 2018, 01:03 PM IST
ಮುಗಿಯದ ಹೈಡ್ರಾಮ, ರಾಜಭವನ ಅಂಗಣದಲ್ಲಿ ಅಧಿಕಾರದ  ಚೆಂಡು

ಸಾರಾಂಶ

ಚೆನ್ನೈ (ಫೆ.13): ಪನ್ನೀರ್ ಸೆಲ್ವಂ ಮತ್ತು ಶಶಿಕಲಾ ನಡುವಿನ ಕುರ್ಚಿಗಾಗಿ ಕಿತ್ತಾಟದ ಚೆಂಡು ಸದ್ಯ ರಾಜಭವನದ ಅಂಗಳಕ್ಕೆ ತಲುಪಿದೆ. ರಾಜ್ಯಪಾಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವತ್ತ ಎಲ್ಲರ ಚಿತ್ತ ನೆಟ್ಟಿದೆ.

ಚೆನ್ನೈ (ಫೆ.13): ಪನ್ನೀರ್ ಸೆಲ್ವಂ ಮತ್ತು ಶಶಿಕಲಾ ನಡುವಿನ ಕುರ್ಚಿಗಾಗಿ ಕಿತ್ತಾಟದ ಚೆಂಡು ಸದ್ಯ ರಾಜಭವನದ ಅಂಗಳಕ್ಕೆ ತಲುಪಿದೆ. ರಾಜ್ಯಪಾಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವತ್ತ ಎಲ್ಲರ ಚಿತ್ತ ನೆಟ್ಟಿದೆ. ಸುಮಾರು ಶಾಸಕರು, ಸಂಸದರು ಪನ್ನೀರ್ ಸೆಲ್ವಂ ಪಾಳಯದಲ್ಲಿದ್ದಾರೆ.

ಪನ್ನೀರ್ ಸೆಲ್ವಂ ಮತ್ತು ಶಶಿಕಲಾ ನಡುವಿನ ಕಿತ್ತಾಟ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಒಂದು ವಾರದೊಳಗೆ ವಿಶೇಷ ವಿಧಾನಸಭಾ ಅಧಿವೇಶನವನ್ನು ಕರೆದು ವಿಶ್ವಾಸಮತ ಯಾಚನೆಯನ್ನು ಮಾಡಿ ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಗೆ ಸಲಹೆ ನೀಡಿದ್ದಾರೆ.  

1998 ರಲ್ಲಿ ಉತ್ತರ ಪ್ರದೇಶದಲ್ಲಿ ಆಗ ಮುಖ್ಯಮಂತ್ರಿಯಾಗಿದ್ದ ಜಗದಾಂಬಿಕ ಪಾಲ್ ಮತ್ತು ಕಲ್ಯಾಣ್ ಸಿಂಗ್ ನಡುವೆ ಇದೇ ರೀತಿ ರಾಜಕೀಯ ಬಿಕ್ಕಟ್ಟು ಏರ್ಪಟ್ಟಾಗ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ, ವಿಧಾನಸಭೆಗೆ ವಿಶ್ವಾಸಮತ ಯಾಚನೆ ನಡೆಸುವಂತೆ ಆದೇಶಿಸಿತ್ತು ಎಂದು ಮುಕುಲ್ ರೋಹಟ್ಗಿ ಉದಾಹರಣೆ ನೀಡಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೈಂಗಿಕ ಕಿರುಕುಳದ ಆರೋಪದ ನಂತರ ವಿದ್ಯಾರ್ಥಿ ಸಾವು: 4ನೇ ಮಹಡಿಯಿಂದ ಕೆಳಗೆ ಹಾರಿರುವ ಶಂಕೆ
ಹೊಸ ವರ್ಷದ ರಾತ್ರಿ ಬೆಂಗಳೂರಲ್ಲಿ ಪ್ರಯಾಣಕ್ಕೆ ವಿಶೇಷ ಬಸ್‌ ವ್ಯವಸ್ಥೆ! ಎಲ್ಲಿಂದ? ಎಲ್ಲಿಗೆ?