
ನವದೆಹಲಿ(ಅ.04): ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ಡಿವಿ ಸದಾನಂದಗೌಡ ನಡುವೆ ನಡೆದಿದ್ದ ಟ್ವೀಟ್ ಸಮರ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಮನಕ್ಕೆ ಬಂದಿದೆ.
ನೆರೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿರುವ ಬಿಜೆಪಿ ಪ್ರಭಾವಿ ಸಂಸದರನ್ನು ಚಕ್ರವರ್ತಿ ಸೂಲಿಬೆಲೆ ತರಾಟೆಗೆ ತೆಗೆದುಕೊಂಡಿದ್ದರು. ಈ ಕುರಿತು ವರದಿ ಪ್ರಕಟಿಸಿದ್ದ ಸುವರ್ನನ್ಯೂಸ್ ಸೇರಿದಂತೆ ಚಕ್ರವರ್ತಿ ಸೂಲಿಬೆಲೆ ಅವರ ಟ್ವಿಟ್ಟರ್ ಅಕೌಂಟ್'ನ್ನು ಸದಾನಂದ ಗೌಡ ಬ್ಲಾಕ್ ಮಾಡಿದ್ದರು.
ಸದಾನಂದ ಗೌಡರ ಈ ನಡೆಗೆ ಮತ್ತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಸೂಲಿಬೆಲೆ, ಜನ ಪ್ರತಿನಿಧಿಗಳಿಂದ ಇಮತಹ ನಡೆ ನಿರೀಕ್ಷಿಸಿರಲಿಲ್ಲ ಎಂದು ಹರಿಹಾಯ್ದಿದ್ದರು. ಅಲ್ಲದೇ ಗೌಡರ ನಡೆಗೆ ಸಾರ್ವಜನಿಕವಾಗಿಯೂ ತೀವ್ರ ಆಕ್ರೋಶ ವ್ತಕ್ತವಾಗಿತ್ತು.
ಈ ಎಲ್ಲ ಬೆಳವಣಿಗೆಗಳು ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತಲುಪಿದ್ದು, ಇಬ್ಬರ ಜಗಳದ ಕುರಿತು ಶಾ ವರದಿ ತರಿಸಿಕೊಂಡಿದ್ದಾರೆ ಎನ್ನಲಾಗಿದೆ. ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಮುಂದಿಡಿ ಇಟ್ಟಿದ್ದು, ಈ ಮಧ್ಯೆ ರಾಜ್ಯದಲ್ಲಿ ಪಕ್ಷ ಮತ್ತು ಸರ್ಕಾರದ ವಿರುದ್ಧ ಸ್ಫೋಟವಾಗಿರುವ ಅಸಮಾಧಾನ ಶಮನಕ್ಕೆ ಮುಂದಾಗಲು ಶಾ ಸೂಚನೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ನೆರೆ ಪರಿಹಾರದ ಕುರಿತು ಜನ ಮತ್ತು ಮಾಧ್ಯಮಗಳು ಕೇಳುವ ಪ್ರಶ್ನೆಗಳಿಗೆ ಸಂಯಮದಿಂದ ಉತ್ತರಿಸುವಂತೆಯೂ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.