
ಗಾಂಧಿಧಾಮ್(ನ. 04): ಗುಜರಾತ್ ವಿಚಾರದಲ್ಲಿ ಬಿಜೆಪಿ ಸುಳ್ಳುಗಳನ್ನೇ ಹೇಳಿಕೊಂಡು ಲಾಭ ಮಾಡಿಕೊಳ್ಳುತ್ತಿದೆ ಎಂದು ಟೀಕಿಸುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ತಿರುಗೇಟು ನೀಡಿದ್ದಾರೆ. ಗುಜರಾತ್ ರಾಜ್ಯಕ್ಕೆ ಕಾಂಗ್ರೆಸ್ ಸರಕಾರದ ಕೊಡುಗೆ ಏನು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರು ಪ್ರಶ್ನೆಸಿದ್ದಾರೆ. ಕಚ್ಛ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಅಮಿತ್ ಶಾ, ಕಾಂಗ್ರೆಸ್ ಉಪಾಧ್ಯಕ್ಷರಿಗೆ 5 ಪ್ರಶ್ನೆಗಳನ್ನು ಕೇಳಿದ್ದಾರೆ.
ರಾಹುಲ್'ಗೆ ಅಮಿತ್ ಶಾ 5 ಪ್ರಶ್ನೆಗಳು:
1) ನರ್ಮದಾ ಯೋಜನೆ ಪೂರ್ಣಗೊಳಿಸಲು ಯುಪಿಎ ಸರಕಾರ ಯಾಕೆ ಅನುಮತಿ ಕೊಡಲಿಲ್ಲ?
2) ನರ್ಮದಾ ಅಣೆಕಟ್ಟು ಗೇಟುಗಳನ್ನು ಮುಚ್ಚಲು ಕಾಂಗ್ರೆಸ್ ಯಾಕೆ ಅನುಮತಿ ಕೊಡಲಿಲ್ಲ?
3) ಕಚ್'ನ ರನ್ ಅಥವಾ ಉಪ್ಪುನೀರಿನ ಪ್ರದೇಶಕ್ಕೆ ಯಾಕೆ ವಿಶೇಷ ಅನುದಾನ ಕೊಡಲಿಲ್ಲ?
4) ಗಾಂಧಿನಗರಕ್ಕೆ ಯಾಕೆ ಕೆಂದ್ರದ ಅನುದಾನ ಸಿಕ್ಕಿರಲಿಲ್ಲ?
5) ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಗುಜರಾತ್'ಗೆ ಹಲವು ವರ್ಷ ಕಚ್ಚಾ ತೈಲದ ರಾಯಲ್ಟಿ ಧನವನ್ನು ಯಾಕೆ ಕೊಡಲಿಲ್ಲ?
ಗುಜರಾತ್'ನಲ್ಲಿ ಡಿಸೆಂಬರ್ 9 ಮತ್ತು 14ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿ. 18ರಂದು ಮತ ಎಣಿಕೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.