ನಮ್ಮ ಸರ್ಕಾರದ ಬಗ್ಗೆ‌ ಮಾತನಾಡುವ ನೈತಿಕತೆ ಅಮಿತ್ ಶಾಗೆ ಇಲ್ಲ: ಸಿಎಂ ಸಿದ್ದರಾಮಯ್ಯ

Published : Nov 28, 2016, 02:28 AM ISTUpdated : Apr 11, 2018, 12:40 PM IST
ನಮ್ಮ ಸರ್ಕಾರದ ಬಗ್ಗೆ‌ ಮಾತನಾಡುವ ನೈತಿಕತೆ ಅಮಿತ್ ಶಾಗೆ ಇಲ್ಲ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಸಿಬಿಐ ಅನುಕೂಲ ಮಾಡಿಕೊಟ್ಟ ಕಾರಣ ಅಮಿತ್ ಶಾ ಇಂದು ಹೊರಗಿದ್ದಾರೆ  ಎಂದಿರುವ ಸಿದ್ದರಾಮಯ್ಯ, ಅಮಿತ್​ ಶಾಗೆ ನಮ್ಮ ಸರ್ಕಾರದ ಬಗ್ಗೆ‌ ಮಾತನಾಡುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ನ.28): ರಾಜ್ಯ ಸರ್ಕಾರದ ವಿರುದ್ಧ ನಿನ್ನೆ ವಾಗ್ದಾಳಿ ನಡೆಸಿದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅಮಿತ್​ ಶಾ ಒಬ್ಬ ಕೊಲೆ ಆರೋಪಿ, ನರೇಂದ್ರ ಮೋದಿ ಪ್ರಧಾನಿ ಆಗದಿರುತ್ತಿದ್ದರೆ ಅಮಿತ್​ ಶಾ ಜೈಲಿನಲ್ಲಿ ಇರಬೇಕಿತ್ತು, ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಿಬಿಐ ಅನುಕೂಲ ಮಾಡಿಕೊಟ್ಟ ಕಾರಣ ಅಮಿತ್ ಶಾ ಇಂದು ಹೊರಗಿದ್ದಾರೆ  ಎಂದಿರುವ ಸಿದ್ದರಾಮಯ್ಯ, ಅಮಿತ್​ ಶಾಗೆ ನಮ್ಮ ಸರ್ಕಾರದ ಬಗ್ಗೆ‌ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

ಭಾನುವಾರ ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ಏರ್ಪಡಿಸಿದ್ದ ಹಿಂದುಳಿದ ಸಮುದಾಯಗಳ ಏಕತಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ್ದ ಅಮಿತ್ ಶಾ, ದೇಶದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕ ರಾಜ್ಯದಲ್ಲಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಅಭಿವೃದ್ಧಿ ವಿಚಾರದಲ್ಲಿ ಸಾಕಷ್ಟು ಹಿಂದುಳಿದಿದೆ ಎಂದು ಆರೋಪಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ