
ನವದೆಹಲಿ: ನಟ ರಜನೀಕಾಂತ್ ರಾಜಕೀಯ ಪ್ರವೇಶದ ಬಗ್ಗೆ ಗುಸುಗುಸು ಹಬ್ಬಿರುವಾಗಲೇ, ಅವರು ಬಿಜೆಪಿ ಸೇರುವುದಾದರೆ ಅವರಿಗೆ ಪೂರ್ಣ ಸ್ವಾಗತ ಎಂದು ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಹಿರಂಗವಾಗಿಯೇ ಆಹ್ವಾನ ನೀಡಿದ್ದಾರೆ.
ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ ಅಮಿತ್ ಶಾ, ತಮಿಳುನಾಡಿನಲ್ಲಿ ಸದ್ಯ ಬಿಜೆಪಿ ದುರ್ಬಲವಾಗಿದೆ. ಕೇಂದ್ರ ಸರ್ಕಾರ ಕೈಗೊಂಡ ವಿವಿಧ ಕ್ರಮಗಳನ್ನು ಜನರ ಗಮನಕ್ಕೆ ತರುವ ಮೂಲಕ ನಾವು ತಮಿಳುನಾಡಲ್ಲಿ ಪಕ್ಷ ಬಲವರ್ದನೆ ಮಾಡುತ್ತೇವೆ. ನಾವು ಎಲ್ಲಾ ಒಳ್ಳೆಯ ವ್ಯಕ್ತಿಗಳನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ. ಅದೇ ರೀತಿ ರಜನೀಕಾಂತ್ರನ್ನು ಕೂಡಾ. ಆದರೆ ಬಿಜೆಪಿ ಸೇರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕಿರುವುದು ಸ್ವತಃ ರಜನೀ ಅವರೇ ಎಂದು ಶಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.