ಮಾಸ್ಟರ್’ಮೈಂಡ್ ಭೇಟಿಯಾದ ಚಾಣಕ್ಯ: ಶಾ, ಧೋವಲ್ ಭೇಟಿ!

Published : Aug 04, 2019, 05:57 PM IST
ಮಾಸ್ಟರ್’ಮೈಂಡ್ ಭೇಟಿಯಾದ ಚಾಣಕ್ಯ: ಶಾ, ಧೋವಲ್ ಭೇಟಿ!

ಸಾರಾಂಶ

ಅಮಿತ್ ಶಾ, ರಾಜೀವ್ ಗೌಬಾ, ಅಜಿತ್ ಧೋವಲ್ ಮಾತುಕತೆ|  ಕಣಿವೆ ರಾಜ್ಯದ ಭದ್ರತಾ ಸ್ಥಿತಿಗಳ ಕುರಿತು ತ್ರಿಮೂರ್ತಿಗಳ ಚರ್ಚೆ| ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ಮಸೂದೆ ಮಂಡಿಸಲಿರುವ ಅಮಿತ್ ಶಾ| ನಾಳೆ ಮಸೂದೆ ಮಂಡಿಸಲು ಸಿದ್ಧತೆ ನಡೆಸಿರುವ ಕೇಂದ್ರ ಗೃಹ ಸಚಿವ|

ನವದೆಹಲಿ(ಆ04): ಮಹತ್ವದ ಬೆಳವಣಿಗೆಯೊಂದರಲ್ಲಿ ಕಣಿವೆ ರಾಜ್ಯದ ಭದ್ರತಾ ಸ್ಥಿತಿಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾತುಕತೆ ನಡೆಸಿದ್ದಾರೆ.

ನಾಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರ ಮೀಸಲಾತಿ(ಎರಡನೇ ತಿದ್ದುಪಡಿ)ಮಸೂದೆಯನ್ನು ಮಂಡಿಸಲು ಸಜ್ಜಾಗಿದ್ದು, ಅನಿಶ್ಚಿತತೆ ನಡುವೆಯೇ ಕಣಿವೆಗೆ ಭೇಟಿ ನೀಡಲು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಅಮಿತ್ ಶಾ, ರಾಜೀವ್ ಗೌಬಾ ಹಾಗೂ ಅಜಿತ್ ಧೋವಲ್ ಭೇಟಿಯಾಗಿ ಮಾತುಕತೆ ನಡೆಸಿದರು.  ಈ ವೇಳೆ ಗುಪ್ತಚರ ಇಲಾಖೆ ಮುಖ್ಯಸ್ಥ ಅರವಿಂದ್ ಕುಮಾರ್ ಹಾಗೂ ರಾ ಮುಖ್ಯಸ್ಥ ಸಮಂತ್ ಗೋಯಲ್ ಕೂಡ ಉಪಸ್ಥಿತರಿದ್ದರು.

ಈ ಮೂವರ ಭೇಟಿ ಭಾರೀ ಕುತೂಹಲ ಮೂಡಿಸಿದ್ದು, ಸಭೆಯಲ್ಲಿ ಕೈಗೊಂಡ ನಿರ್ಣಯಗಳೇನು ಎಂಬುದಉ ಇನ್ನಷ್ಟೇ ಗೊತ್ತಾಗಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

666 operation Dream Theatre Teaser: ಶಿವರಾಜ್‌ಕುಮಾರ್-ಧನಂಜಯ್ '666 ಆಪರೇಶನ್ ಡ್ರೀಮ್ ಥಿಯೇಟರ್ ಟೀಸರ್' ಬಿಡುಗಡೆ; ಭಾರೀ ಹೈಪ್ ಸೃಷ್ಟಿ!
ಕೊಡಗಿನಲ್ಲಿ ಅವ್ಯವಸ್ಥೆ ಕಂಡು ಗರಂ ಆದ ಉಪ ಲೋಕಾಯುಕ್ತ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ