
ತುಮಕೂರು: ಚುನಾವಣೆ ಹತ್ತಿರವಾಗ್ತಿದ್ದಂತೆ ಪ್ರಚಾರದ ಅಬ್ಬರ ಜೋರಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ 2-ದಿನಗಳ ರಾಜ್ಯದ ಪ್ರವಾಸದಲ್ಲಿದ್ದಾರೆ. ಇಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ ಸುಮಾರು 20 ನಿಮಿಷಗಳ ಕಾಲ ಶ್ರೀಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸ್ವಾಮೀಜಿಗಳನ್ನು ಭೇಟಿಯಾಗುವ ಸಂದರ್ಭದಲ್ಲಿ ಅಮಿತ್ ಶಾ ಈ ಬಾರಿ ಬಹಳ ಜಾಗರೂಕರಾಗಿದ್ದರು. ಅಮಿತ್ ಶಾ ಸ್ವಾಮೀಜೀ ಕಾಲಿಗೂ ಬಿದ್ದು ನಮಸ್ಕರಿಸಿ, ಶ್ರೀಗಳಿಂದ ಆಶೀರ್ವಾದವನ್ಜು ಪಡೆದಿದ್ದಾರೆ. ಅದೇ ಫೋಟೋವನ್ನು ತಮ್ಮ ಟ್ವೀಟರ್ ಖಾತೆಗೆ ಅಪ್ಲೋಡ್ ಮಾಡಿ, ಕನ್ನಡದಲ್ಲೇ ಟ್ವೀಟಿಸಿದ್ದಾರೆ!
ಕಳೆದ ವರ್ಷ ಆಗಸ್ಟ್’ನಲ್ಲಿ ನಾಗಮಂಗಲದಲ್ಲಿ ಆದಿಚುಂಚನಾಗಿರಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಮಿತ್ ಶಾ ಸ್ವಾಮೀಜಿಗಳ ಮುಂದೆ ಕಾಲ ಮೇಲೆ ಕಾಲು ಹಾಕಿ ಕೂತು ಚರ್ಚೆ ನಡೆಸಿದ್ದರು. ಆ ಫೋಟೋ ಬಳಿಕ ವೈರಲ್ ಆಗಿತ್ತು, ಶಾ ಸ್ವಾಮೀಜಿಗೆ ಅಗೌರವ ತೋರಿದ್ದಾರೆಂದು ಭಕ್ತರಿಂದ ಆಕ್ರೋಶ ವ್ಯಕ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.