ರಾಷ್ಟ್ರಪತಿ ಚುನಾವಣೆ: ಉದ್ಧವ್ ಠಾಕ್ರೆ ಜತೆ ಅಮಿತ್ ಶಾ ‘ಗುಪ್ತ’ ಮಾತುಕತೆ

Published : Jun 18, 2017, 04:21 PM ISTUpdated : Apr 11, 2018, 12:58 PM IST
ರಾಷ್ಟ್ರಪತಿ ಚುನಾವಣೆ: ಉದ್ಧವ್ ಠಾಕ್ರೆ ಜತೆ ಅಮಿತ್ ಶಾ ‘ಗುಪ್ತ’ ಮಾತುಕತೆ

ಸಾರಾಂಶ

ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಮುಂಬೈ: ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇಲ್ಲಿನ  ಬಂದ್ರಾದಲ್ಲಿರುವ ಠಾಕ್ರೆ ಅವರ 'ಮಾತೋಶ್ರೀ' ನಿವಾಸಕ್ಕೆ ಇಂದು ಅಮಿತ್ ಶಾ ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್‌ ಭೇಟಿ ನೀಡಿ ಸುಮಾರು 75 ನಿಮಿಷಗಳ ಕಾಲ ಗುಪ್ತ ಮಾತುಕತೆ ನಡೆಸಿದರು.

ಅಮಿತ್ ಶಾ ಪಕ್ಷದ ಬಲವರ್ಧನೆಗೆ ಮೂರು ದಿನಗಳ ಕಾಲ ಮಹಾರಾಷ್ಟ್ರ ಪ್ರವಾಸ ಕೈಗೊಂಡ ಮರುದಿನವೇ ಈ ಬೆಳವಣಿಗೆ ನಡೆದಿದೆ.

ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮುನ್ನ ಎನ್‌ಡಿಎ ಸರ್ಕಾರ ತನ್ನ ಎಲ್ಲ ಮಿತ್ರ ಪಕ್ಷಗಳ ಜೊತೆ ಚರ್ಚಿಸುತ್ತಿದೆ. ಅಂತೆಯೇ ಇಂದು ಠಾಕ್ರೆ ಅವರನ್ನು ಶಾ ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಶಿವ ಸೇನೆಯು ರಾಷ್ಟ್ರಪತಿ ಹುದ್ದೆಗೆ ಭಾರತದ ಹಸಿರು ಕ್ರಾಂತಿ ಪಿತಾಮಹ ಎಂ.ಎಸ್‌. ಸ್ವಾಮಿನಾಥನ್ ಅವರನ್ನು ಅಭ್ಯರ್ಥಿಯನ್ನಾಗಿಸುವ ಸಲಹೆಯನ್ನು ನೀಡಿತ್ತು. ಜೊತೆಗೆ ಈ ಹುದ್ದೆಯ ಚುನಾವಣೆಗೆ ಸ್ವತಂತ್ರ ನಿಲುವನ್ನು ತಾಳುವುದಾಗಿ ಶಿವಸೇನೆ ಹೇಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ