ಗಾಂಧೀಜಿ ಆಶಯವನ್ನು ರಾಹುಲ್ ಗಾಂಧಿ ನೆರವೇರಿಸುತ್ತಿದ್ದಾರೆ: ಅಮಿತ್ ಶಾ

Published : Aug 02, 2017, 09:25 PM ISTUpdated : Apr 11, 2018, 12:59 PM IST
ಗಾಂಧೀಜಿ ಆಶಯವನ್ನು ರಾಹುಲ್ ಗಾಂಧಿ ನೆರವೇರಿಸುತ್ತಿದ್ದಾರೆ: ಅಮಿತ್ ಶಾ

ಸಾರಾಂಶ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಪಕ್ಷ ಹಾಗೂ ಕುಟುಂಬ ರಾಜಕಾರಣದ ಅಂತ್ಯಕ್ಕೆ ರಾಹುಲ್ ಗಾಂಧಿ ಕಾರಣರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರೊಹ್ತಕ್, ಹರ್ಯಾಣ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಪಕ್ಷ ಹಾಗೂ ಕುಟುಂಬ ರಾಜಕಾರಣದ ಅಂತ್ಯಕ್ಕೆ ರಾಹುಲ್ ಗಾಂಧಿ ಕಾರಣರಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೆಂದು ಗಾಂಧೀಜಿ ಹೇಳಿದ್ದರು. ಆದರೆ ಅವರದನ್ನು ಮಾಡಲಿಲ್ಲ, ಇನ್ನೊಬ್ಬ ಗಾಂಧಿ ಅದನ್ನು ಮಾಡುತ್ತಿದ್ದಾರೆ ಎಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅಮಿತ್ ಶಾ ಹೇಳಿದ್ದಾರೆ.

ಮುಂದುವರಿದು ಬಿಜೆಪಿಯ ಸಾಧನೆಯನ್ನು ಕೊಂಡಾಡಿದ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದಿರುವ ಎಲ್ಲೆಡೆ ಅಭಿವೃದ್ಧಿ ನಡೆದಿದೆ.  ಬಿಜೆಪಿಯು ದೇಶವನ್ನು ಕುಟುಂಬ ಹಾಗೂ ತುಷ್ಟೀಕರಣ ರಾಜಕಾರಣದಿಂದ ಮುಕ್ತಗೊಳಿಸಿದೆ. ತತ್ವ ಸಿದ್ಧಾಂತಗಳ ಮೇಲೆ ನೆಲೆ ನಿಂತಿರುವ ಪಕ್ಷದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವೆಂದು ಅವರು ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನಸು ಕೆಡವಿದ ಕಮ್ಯೂನಿಸ್ಟ್ ಭ್ರಷ್ಟ ಆಡಳಿತ ಅಂತ್ಯಗೊಳಿಸಿ ಕೇರಳದಲ್ಲಿ ಬಿಜೆಪಿ ಅರಳಿಸಿದ ಅತುಲ್ ಸ್ಪೂರ್ತಿಯ ಕತೆ
ಕನ್ನಡ ನಟರು ಬೇರೆ ಭಾಷೆಗಳಲ್ಲಿ ಅತಿಥಿ ಪಾತ್ರ ಮಾಡುತ್ತಾರೆ, ಆದ್ರೆ, ಪರಭಾಷೆಯವರು ಇಲ್ಲಿಗೆ ಬರುವುದಿಲ್ಲ: ಕಿಚ್ಚ ಸುದೀಪ್