ದುರಂತ ಮೊದಲ ಬಾರಿಯಲ್ಲ; ಯೋಗಿ ರಾಜಿನಾಮೆ ಪ್ರಶ್ನೆಯೇ ಇಲ್ಲ: ಅಮಿತ್ ಶಾ

Published : Aug 14, 2017, 05:46 PM ISTUpdated : Apr 11, 2018, 12:34 PM IST
ದುರಂತ ಮೊದಲ ಬಾರಿಯಲ್ಲ; ಯೋಗಿ ರಾಜಿನಾಮೆ ಪ್ರಶ್ನೆಯೇ ಇಲ್ಲ: ಅಮಿತ್ ಶಾ

ಸಾರಾಂಶ

ಗೋರಖ್’ಪುರದ ಬಿಆರ್’ಡಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ದುರಂತಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡಬೇಕು ಎನ್ನುವ ಕಾಂಗ್ರೆಸ್ ಒತ್ತಾಯವನ್ನು ಅಮಿತ್ ಶಾ ತಳ್ಳಿ ಹಾಕಿದ್ದಾರೆ.

ನವದೆಹಲಿ (ಆ.14): ಗೋರಖ್’ಪುರದ ಬಿಆರ್’ಡಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ದುರಂತಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡಬೇಕು ಎನ್ನುವ ಕಾಂಗ್ರೆಸ್ ಒತ್ತಾಯವನ್ನು ಅಮಿತ್ ಶಾ ತಳ್ಳಿ ಹಾಕಿದ್ದಾರೆ.

ಭಾರತದಂತಹ ದೊಡ್ಡ ದೇಶಗಳಲ್ಲಿ ಈ ಹಿಂದೆಯೂ ಕೂಡಾ ಇಂತಹ ಘಟನೆಗಳು ನಡೆದಿವೆ. ಇದೇ ಮೊದಲ ಬಾರಿಯೇನಲ್ಲ. ಹಾಗಾಗಿ ಆದಿತ್ಯನಾಥ್ ರಾಜಿನಾಮೆ ಪ್ರಶ್ನೆಯೇ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಆ.07 ರಂದು ಆಕ್ಸಿಜನ್ ಪೂರೈಕೆ ಕೊರತೆಯಿಂದ 70 ಮಕ್ಕಳು ಮೃತಪಟ್ಟಿದ್ದರು. ಸಾವಿನ ಬಗ್ಗೆ ವರದಿ ನೀಡುವಂತೆ ಮಾನವ ಹಕ್ಕು ಆಯೋಗ ಸರ್ಕಾರಕ್ಕೆ ನೋಟೀಸ್ ನೀಡಿದೆ.

ಏತನ್ಮಧ್ಯೆ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲು ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಪ್ರಮುಖವಾದ ಹಬ್ಬವಾಗಿದ್ದು, ಅದ್ದೂರಿಯಾಗಿ ಸಾಂಪ್ರದಾಯಿಕವಾಗಿ ಆಚರಿಸಲು ಪೊಲೀಸರು ಆಯೋಜನೆ ಮಾಡಬೇಕೆಂದು ಯೋಗಿ ಆದೇಶಿಸಿದ್ದಾರೆ.

ಇದಕ್ಕೆ ಅಮಿತ್ ಶಾ ಕೂಡಾ ದನಿಗೂಡಿಸಿದ್ದಾರೆ. ಹಬ್ಬಗಳು ಜನರ ವೈಯಕ್ತಿಕ ನಂಬಿಕೆಗಳಿಗೆ ಬಿಟ್ಟದ್ದು.  ಇದೊಂದು ಸರ್ಕಾರದ ಹಬ್ಬವಲ್ಲ ಎಂದು ಶಾ ಹೇಳಿದ್ದಾರೆ.

ಅಖಿಲೇಶ್'ರಿಂದ 2 ಲಕ್ಷ ರೂ ಪರಿಹಾರ

ಮೃತಪಟ್ಟ ಮಕ್ಕಳ ಕುಟುಂಬದವರಿಗೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಇದನ್ನು ರಾಜಕೀಯಗೊಳಿಸಬಾದು. ಸಿಬಿಐ ತನಿಖೆಯಾಗಬೇಕು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾಸನ: ಸ್ನೇಹಿತರಿಂದಲೇ ರೌಡಿ ಶೀಟರ್‌ ಜೆಸಿಬಿ ಮಂಜು ಹತ್ಯೆಗೆ ಯತ್ನ, ರಕ್ತದ ಮಡುವಲ್ಲಿ ನರಳಾಡಿದ ಮಂಜ
ಪ್ರತಿ ಟ್ವೀಟ್‌ಗೆ ಗರಿಷ್ಠ ಲೈಕ್ಸ್ , ಭಾರತದಲ್ಲಿ ನಂ.1 ಪ್ರಧಾನಿ ಮೋದಿ, ನಂತರದ ಸ್ಥಾನ ಯಾರಿಗೆ?