ಸುಭದ್ರ ಹಾಗೂ ಅಭಿವೃದ್ಧಿ ಪರ ಸರ್ಕಾರ ಗ್ಯಾರಂಟೀ: ಅಮಿತ್ ಶಾ ವಿಶ್ವಾಸ!

By Web DeskFirst Published Jul 27, 2019, 7:11 PM IST
Highlights

ಸೋಮವಾರ ಸದನದಲ್ಲಿ ಬಹುಮತ ಸಾಬೀತುಪಡಿಸಲಿರುವ ಬಿಎಸ್'ವೈ?| ‘ಕರ್ನಾಟಕದಲ್ಲಿ ಬಿಜೆಪಿಯಿಂದ ಸುಭದ್ರ ಹಾಗೂ ಭಿವೃದ್ದಿ ಪರ ಆಡಳಿತ’| ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ| ಟ್ವೀಟ್ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಅಮಿತ್ ಶಾ| ‘ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡುವುದೇ ಬಿಜೆಪಿ ಗುರಿ’|

ನವದೆಹಲಿ(ಜು.27): ಇದೇ ಸೋಮವಾರ(ಜು.29)ದಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸದನದಲ್ಲಿ ಬಹುಮತ ಸಾಬೀತು ಮಾಡಬೇಕಿದ್ದು, ಇಡೀ ದೇಶದ ಚಿತ್ತ ಇದೀಗ ಕರ್ನಾಟಕ ವಿಧಾನಸಭೆಯತ್ತ ನೆಟ್ಟಿದೆ.

ಈ ಮಧ್ಯೆ ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್ ಶಾ ಭರವಸೆ ನೀಡಿದ್ದಾರೆ.

Congrats to ji, newly sworn in CM of Karnataka. I am sure under his leadership and under the guidance of PM Modi, BJP will give a stable, pro-farmer and development oriented govt in the State. I assure people of Karnataka that BJP is committed to fulfil their aspirations.

— Amit Shah (@AmitShah)

ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ, ಯಡಿಯೂರಪ್ಪ ಸರ್ಕಾರ ಕರ್ನಾಟಕದಲ್ಲಿ ಸುಭದ್ರ ಹಾಗೂ ಅಭಿವೃದ್ಧಿ ಪರ ಆಡಳಿತ ನೀಡಲಿದೆ ಎಂದು ದೇಶದ ಜನರಿಗೆ ಭರವಸೆ ನೀಡುವುದಾಗಿ ಹೇಳಿದ್ದಾರೆ.

click me!