
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ‘ಕ್ಲಾಸ್’ ಮುಂದುವರೆದಿದ್ದು, ರಾಜ್ಯ ಬಿಜೆಪಿ ಕಾನೂನು ವಿಭಾಗಕ್ಕೂ ಬಿಸಿ ಮುಟ್ಟಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾನೂನು ವಿಭಾಗದ ಸಂಯೋಜಕ ರಾಜಣ್ಣಗೆ ಅಮಿತ್ ಶಾ ಕ್ಲಾಸ್ ತೆಗೆದುಕೊಂಡಿದ್ದು, ಬಿಜೆಪಿ ಕಾನೂನು ವಿಭಾಗದ ಕಾರ್ಯವೈಖರಿಗೆ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಡೆದಿದ್ದರೂ ಯಾಕೆ ಸುಮ್ಮನಿದ್ದೀರಿ? ಈವರೆಗೂ ಎಷ್ಟು ಪಿಐಎಲ್ ಹಾಕಿದ್ದೀರಿ ಎಂದು ಅಮಿತ್ ಶಾ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ್ದಾರೆ.
ಪ್ರಕರಣಗಳ ಕುರಿತು ಕಾನೂನು ವಿಭಾಗ ಏನು ಕ್ರಮ ಕೈಗೊಂಡಿದೆ? ಪಿಐಎಲ್ ಹಾಕಲು ಬರುವುದಿಲ್ಲ ಅಂದ್ರೆ ಹೇಗೆ ಹಾಕೋದು ಅಂತ ಹೇಳುತ್ತೇನೆ, ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.