
ಅಹಮದಾಬಾದ್[ಆ.30]: ಮಾಲಿನ್ಯ ತಡೆದು ಪರಿಸರದ ರಕ್ಷಣೆಗಾಗಿ ಜನತೆ ಹಳೇ ಮಾದರಿಯ ಹಾಗೂ ಹೆಚ್ಚು ಬಾಳಿಕೆ ಬರುವ ಬಟ್ಟೆಗಳ ಬ್ಯಾಗ್ ಮೊರೆ ಹೋಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಿಳೆಯರಿಗೆ ಕರೆ ಕೊಟ್ಟಿದ್ದಾರೆ.
ಅ.2 ರಿಂದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ?
ಅಹಮದಾಬಾದ್ ನಗರಪಾಲಿಕೆ ಬುಧವಾರ ಆಯೋಜಿಸಿದ್ದ 10 ಲಕ್ಷ ಸಸಿ ನೆಡುವ ಮುಕ್ತಾಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬಟ್ಟೆಯ ಚೀಲಗಳು ಹಳೇ ಮಾದರಿ ಫ್ಯಾಷನ್ ಆಗಿರಬಹುದು. ಆದರೆ, ಇಂಥ ಕ್ರಮಗಳಿಂದ ಪ್ಲಾಸ್ಟಿಕ್ ಮಾಲಿನ್ಯದಿಂದ ಭೂಮಿಯನ್ನು ರಕ್ಷಿಸಬಹುದು. ಅಲ್ಲದೆ, ಒಂದೇ ಬಾರಿ ಬಳಕೆ ಮಾಡಬಹುದಾದ ಪ್ಲಾಸ್ಟಿಕ್ ಉತ್ಪಾದನೆ ಸ್ಥಗಿತಗೊಳಿಸಲು ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ವಿರುದ್ಧ ಮೋದಿ ಸಮರ: ಅ. 2ರಂದು ಜನಾಂದೋಲನಕ್ಕೆ ಕರೆ!
ಈ ವೇಳೆ ಶಾ ಅವರು ಸಸಿ ನೆಟ್ಟರು ಹಾಗೂ 8 ಎಲೆಕ್ಟ್ರಿಕ್ ಸಿಟಿ ಬಸ್ಗಳಿಗೆ ಚಾಲನೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.