ಮಲಯಾಳಿ ಜನರನ್ನು ಅವಮಾನಗೊಳಿಸಿದ ಅಮಿತ್ ಶಾ ಕ್ಷಮೆಗೆ ಆಗ್ರಹ

Published : Sep 15, 2016, 05:49 AM ISTUpdated : Apr 11, 2018, 12:45 PM IST
ಮಲಯಾಳಿ ಜನರನ್ನು ಅವಮಾನಗೊಳಿಸಿದ ಅಮಿತ್ ಶಾ ಕ್ಷಮೆಗೆ ಆಗ್ರಹ

ಸಾರಾಂಶ

ತಿರುವನಂತಪುರಂ(ಸೆ.15): ಓಣಂ ಆಚರಣೆಯ ವೇಳೆ ಮಲಯಾಳಿ ಜನರನ್ನು ಅವಮಾನಗೊಳಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕ್ಷಮೆ ಕೋರಬೇಕೆಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ್ರಹಿಸಿದ್ದಾರೆ.

ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಓಣಂ ಹಬ್ಬದ ಪ್ರಯುಕ್ತ ಜನರಿಗೆ  ಶುಭ ಕೋರಿರುವ ಅಮಿತ್ ಶಾ, " ಹ್ಯಾಪಿ ವಾಮನ ಜಯಂತಿ" ಎಂದು ಪೋಸ್ಟ್ ಹಾಕಿದ್ದರು. ಷಾ ಅವರ ಈ ಪೋಸ್ಟ್ ಟ್ವೀಟರ್'ನಲ್ಲಿ ವೈರಲಾಗಿ ಹರಡಿದ್ದು, ಮಲಯಾಳಿಗರನ್ನು ಕೆರಳಿಸಿದೆ.  ಶಾ ಹಾಕಿರುವ ಪೋಸ್ಟ್ ನಲ್ಲಿ ವಿಷ್ಣು ತನ್ನ 5ನೇ ಅವತಾರವಾದ ವಾಮನನ ರೂಪದಲ್ಲಿದ್ದು, ಕೇರಳ ಪ್ರಾಂತ್ಯದ ಮಲಯಾಳಿ ದೊರೆ ಮಹಾಬಲಿ ತಲೆಯ ಮೇಲೆ ಕಾಲಿಟ್ಟಿರುವುದು ಮಲಯಾಳಿಗರು ಕೆರಳುವಂತೆ ಮಾಡಿದೆ.

ಈ ಹಿನ್ನಲೆಯಲ್ಲಿ ಅವರು ಕೂಡಲೆ ಜನರ ಕ್ಷಮೆ ಕೇಳಬೇಕೆಂದು ಪಿಣರಾಯಿ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು
ಬಾಗಲಕೋಟೆ: ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ