
ಬೆಂಗಳೂರು: ಮುಂದಿನ ಚುನಾವಣೆಗೆ ರೂಪಿಸಿರುವ ಯೋಜನೆಗಳನ್ನು ಪೂರೈಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ತಾಕೀತು ಮಾಡಿದ್ದಾರೆ.
ವಿಸ್ತಾರಕ ಯೋಜನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಸುವರ್ಣನ್ಯೂಸ್ಗೆ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಪದಾಧಿಕಾರಿಗಳ ಪೈಕಿ ಹಲವರು ವಿಸ್ತಾರಕ ಯೋಜನೆಯನ್ನು ಪೂರ್ಣಗೊಳಿಸಿಲ್ಲ. ನಾಳೆಯಿಂದ ಐದು ದಿನ ವಿಸ್ತಾರಕ ಯೋಜನೆ ವಿಸ್ತರಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆದೇಶಿಸಿದ್ದಾರೆ.
ಅಮಿತ್ ಶಾ ನಿರ್ದೇಶನದಂತೆ ವಿಸ್ತಾರಕ ಯೋಜನೆ ಪರಿಪೂರ್ಣಗೊಳಿಸಲು ರಾಜ್ಯ ಬಿಜೆಪಿ ತೀರ್ಮಾನಿಸಿ ನಾಳೆಯಿಂದಲೇ ಯೋಜನೆಯನ್ನು ಕೈಗೆತ್ತಿಗೊಳ್ಳಲಿದೆ. ರಾಜ್ಯ ಭೇಟಿ ವೇಳೆ ವಿಸ್ತಾರಕ ಯೋಜನೆಯ ವರದಿಯನ್ನು ಅಮಿತ್ ಶಾ ಪರಿಶೀಲಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.