ರಾಹುಲ್ ಗಾಂಧಿ ಪ್ರವಾಸ ಮುಗಿಯುತ್ತಿದ್ದಂತೆ ಶುರುವಾಗುತ್ತೆ ಅಮಿತ್ ಶಾ ಪ್ರವಾಸ

By Shrilakshmi ShriFirst Published Mar 25, 2018, 7:51 PM IST
Highlights

ಬಹುನಿರೀಕ್ಷಿತ ವಿಧಾನಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಮುಖಂಡರು ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಕಾಲಿಗೆ ಚಕ್ರ ಕಟ್ಟಿಕೊಂಡು ನಿಂತಿದ್ದಾರೆ. ಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳುವ ಹಂಬಲ, ಬಿಜೆಪಿಗೆ ಕಾಂಗ್ರೆಸ್ ಕಿತ್ತೊಗೆಯಬೇಕೆನ್ನುವ ಛಲ ಹೀಗಾಗಿ ಎರಡು ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಮತ್ತೆ -ಮತ್ತೆ ರಾಜ್ಯಕ್ಕೆ ಬರ್ತಾ ಇದ್ದಾರೆ. ರಾಹುಲ್ ಗಾಂಧಿ ಎರಡು ದಿನ ಪ್ರವಾಸ ಮುಗಿಸಿ ದೆಹಲಿ ವಿಮಾನ ಏರುತ್ತಿದ್ದಂತೆ ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ.

ಬೆಂಗಳೂರು (ಮಾ.25):  ಬಹುನಿರೀಕ್ಷಿತ ವಿಧಾನಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಮುಖಂಡರು ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಕಾಲಿಗೆ ಚಕ್ರ ಕಟ್ಟಿಕೊಂಡು ನಿಂತಿದ್ದಾರೆ. ಕಾಂಗ್ರೆಸ್ ಗೆ ಕರ್ನಾಟಕದಲ್ಲಿ ಅಧಿಕಾರ ಉಳಿಸಿಕೊಳ್ಳುವ ಹಂಬಲ, ಬಿಜೆಪಿಗೆ ಕಾಂಗ್ರೆಸ್ ಕಿತ್ತೊಗೆಯಬೇಕೆನ್ನುವ ಛಲ ಹೀಗಾಗಿ ಎರಡು ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರು ಮತ್ತೆ -ಮತ್ತೆ ರಾಜ್ಯಕ್ಕೆ ಬರ್ತಾ ಇದ್ದಾರೆ. ರಾಹುಲ್ ಗಾಂಧಿ ಎರಡು ದಿನ ಪ್ರವಾಸ ಮುಗಿಸಿ ದೆಹಲಿ ವಿಮಾನ ಏರುತ್ತಿದ್ದಂತೆ ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ.

ಇಂದು ರಾತ್ರಿ 10 :30 ಕ್ಕೆ ಕೆಂಪೇಗೌಡ ಏರ್ಪೊರ್ಟ್ ಗೆ ಬಂದಿಳಿಯಲಿರುವ ಅಮಿತ್ ಶಾ, ನೇರವಾಗಿ ತಾಜ್ ವಿವಾಂತ್ ಹೊಟೆಲ್ ಗೆ ಬಂದು ತಂಗಲ್ಲಿದ್ದಾರೆ. ಬೆಳಗ್ಗೆ ಸರಿಯಾಗಿ 8.45 ಕ್ಕೆ ಹ್ಯಾಲಿಕ್ಯಾಪ್ಟರನಲ್ಲಿ ತುಮಕೂರಿಗೆ ಹೊರಡಲಿರುವ ಬಿಜೆಪಿ ಚಾಣಕ್ಯ 9.30 ಕ್ಕೆ ತುಮಕೂರು ತಲುಪಲಿದ್ದಾರೆ. ಅಲ್ಲಿಂದ 9.40 ಕ್ಕೆ  ಸಿದ್ದಗಂಗಾ ಮಠಕ್ಕೆ ತೆರಳಿ ಶತಾಯುಶಿ ಸಿದ್ದಗಂಗಾ ಶ್ರೀಗಳ ಆಶಿರ್ವಾದ ಪಡೆಯಲಿದ್ದಾರೆ.

ಶ್ರೀಗಳ ಆಶಿರ್ವಾದ ಪಡೆದು ಬಳಿಕ ತಿಪಟೂರಿಗೆ ತೆರಳಿ ತೆಂಗು ಬೆಳೆಗಾರರ ಜೊತೆ ಚರ್ಚೆ ನಡೆಸಲಿದ್ದಾರೆ. ಆದಾದ ಬಳಿಕ ತಿಪಟೂರಿನಿಂದ ಶಿವಮೊಗ್ಗ ಜಿಲ್ಲೆಗೆ ತರಳಲಿರುವ ಶಾ, ಕವಿಶೈಲಕ್ಕೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ತಿರ್ಥಹಳ್ಳಿ, ಅದಾದ ಬಳಿಕ ಶಿವಮೊಗ್ಗ ಸಿಟಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೊ ಬಳಿಕ ನಿಗದಿಯಾಗಿರುವ ಕೆಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ರಾತ್ರಿ ಕೆ ಎಸ್ ಈಶ್ವರಪ್ಪ ನಿವಾಸದಲ್ಲಿ ಊಟ ಮಾಡಲಿರುವ ಅಮಿತ್ ಶಾಗೆ ಬಿಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಸಾಥ್ ನೀಡಲಿದ್ದಾರೆ.

 

click me!